ವಿಧಾನಸಭೆಯಲ್ಲಿ ಸಾವರ್ಕರ್ ಭಾವಚಿತ್ರ ಅನಾವರಣಕ್ಕೆ ಕಾಂಗ್ರೆಸ್ ವಿರೋಧ; ಪ್ರ#ತಿಭಟಿಸಿದ ಕಾಂಗ್ರೆಸ್ ನಾಯಕರು

ವಿಧಾನಸಭೆಯಲ್ಲಿ ಸಾವರ್ಕರ್ ಭಾವಚಿತ್ರ ಅನಾವರಣಕ್ಕೆ ಕಾಂಗ್ರೆಸ್ ವಿರೋಧ; ಪ್ರ#ತಿಭಟಿಸಿದ ಕಾಂಗ್ರೆಸ್ ನಾಯಕರು


ಬೆಳಗಾವಿ(Headlines Kannada): ರಾಜ್ಯ BJP ಸರ್ಕಾರ ಸುವರ್ಣಸೌಧದ ವಿಧಾನಸಭೆಯಲ್ಲಿ ಸಾವರ್ಕರ್ ಭಾವಚಿತ್ರವನ್ನು ಅನಾವರಣ ಮಾಡಿದ್ದು, ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಾವರ್ಕರ್ ಫೋಟೋವನ್ನು ಅನಾವರಣ ಮಾಡಲಾಗಿದೆ. ಜೊತೆಗೆ ಮಹಾತ್ಮ ಗಾಂಧೀಜಿ, ಅಂಬೇಡ್ಕರ್, ನೇತಾಜಿ, ಸರ್ದಾರ್ ವಲ್ಲಭ್ ಬಾಯ್ ಪಟೇಲ್, ಸ್ವಾಮಿ ವಿವೇಕಾನಂದ, ಬಸವಣ್ಣರ ಫೋಟೋಗಳನ್ನೂ ಕೂಡ ಅನಾವರಣ ಮಾಡಲಾಯಿತು. 

ಸಾವರ್ಕರ್ ಫೋಟೋವನ್ನು ವಿಧಾನಸಭೆಯಲ್ಲಿ ಅನಾವರಣಗೊಳಿಸಿದ್ದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿ, ಸುವರ್ಣಸೌಧದ ಮೆಟ್ಟಿಲುಗಳ ಮೇಲೆ ಪ್ರ#ತಿಭಟನೆ ನಡೆಸಿದೆ. 

KPCC ಅಧ್ಯಕ್ಷ ಡಿಕೆ.ಶಿವಕುಮಾರ್ ಮಾತನಾಡಿ, ಸಾವರ್ಕರ್ ಫೋಟೋ ಅನಾವರಣಗೊಳಿಸಿರುವುದನ್ನು ನೋಡಿದರೆ ವಿಧಾನಸಭೆ ಕಲಾಪ ನಡೆಯಬಾರದು ಎಂಬುದು ಅವರ ಅಪೇಕ್ಷೆ. ಕಲಾಪ ಅಡ್ಡಿಪಡಿಸಲೆಂದೇ ಬಿಜೆಪಿಯವರು ಬಯಸುತ್ತಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧ ಸಾಕಷ್ಟು ಭ್ರ#ಷ್ಟಾಚಾರ ವಿಚಾರಗಳನ್ನು ಎತ್ತಲಿದ್ದೇವೆ ಎಂಬ ಕಾರಣಕ್ಕೆ ಫೋಟೋ ವಿಚಾರವನ್ನು ತಂದಿದ್ದಾರೆ. ಬಿಜೆಪಿ ಸರ್ಕಾರ ಬಳಿ ಯಾವುದೇ ಅಭಿವೃದ್ಧಿ ಅಜೆಂಡಾ ಇಲ್ಲ, ಅದಕ್ಕಾಗಿಯೇ ಈ ಫೋಟೋ ಅನಾವರಣಗೊಳಿಸಿದ್ದಾರೆ ಎಂದು ಎಂದು ಕಿಡಿಕಾರಿದ್ದಾರೆ.

ಸಾವರ್ಕರ್ ಭಾವಚಿತ್ರ ಹಾಕಿರುವುದಕ್ಕೆ ವಿ#ರೋಧ ವ್ಯಕ್ತಪಡಿಸಿದ  ವಿಪಕ್ಷ ನಾಯಕ ಸಿದ್ದರಾಮಯ್ಯ, ಚರ್ಚೆ ಆಗದೆ ಇಟ್ಟಿರುವುದಕ್ಕೆ ನಮ್ಮ ವಿರೋಧವಿದೆ.‌ ನಾವು ಈ ವಿಷಯವನ್ನು ವಿಧಾನಸಭೆಯಲ್ಲಿ ಪ್ರಸ್ತಾಪ ಮಾಡುತ್ತೇವೆ. ಕಾನೂನು‌ ಸುವ್ಯವಸ್ಥೆ, ಭ್ರಷ್ಟಾಚಾರ ವಿಚಾರಗಳಿಂದ ಜನರ ಗಮನವನ್ನು ಡೈವರ್ಟ್ ಮಾಡಲು ಫೋಟೋ ವಿವಾದ ಮುನ್ನಲೆಗೆ‌ ತಂದಿದ್ದಾರೆ ಎಂದರು.

Ads on article

Advertise in articles 1

advertising articles 2

Advertise under the article