ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್ ಕು#ಸಿತ ಪ್ರಕರಣ; ಮೃ#ತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ: ಬೊಮ್ಮಾಯಿ ಘೋಷಣೆ

ಬೆಂಗಳೂರಿನಲ್ಲಿ ಮೆಟ್ರೋ ಪಿಲ್ಲರ್ ಕು#ಸಿತ ಪ್ರಕರಣ; ಮೃ#ತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ: ಬೊಮ್ಮಾಯಿ ಘೋಷಣೆ


ಧಾರವಾಡ(Headlineskannada): ಬೆಂಗಳೂರಲ್ಲಿ ನಡೆಯುತ್ತಿರುವ ಮೆಟ್ರೋ ಕಾಮಗಾರಿ ವೇಳೆ ಕಬ್ಬಿಣದ ಪಿಲ್ಲರ್ ಬಿದ್ದು ತಾಯಿ, ಮಗು ಸಾ#ವನ್ನಪ್ಪಿದ ಪ್ರಕರಣಕ್ಕೆ ಸಂಭಂದಿಸಿದಂತೆ ಮೃ#ತರ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 10 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. 

ಈಗಾಗಲೇ BMRCL ಕೂಡ ತಲಾ 10 ಲಕ್ಷ ಪರಿಹಾರ ಘೋಷಣೆ ಮಾಡಿದೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ  ಮಾತನಾಡಿದ ಅವರು, ಈ ಬಗ್ಗೆ ಎಲ್ಲ ಮಾಹಿತಿ ಪಡೆಯುತ್ತಿದ್ದೇನೆ. ನಾಗವಾರ್‌ನಲ್ಲಿ ಸ್ಟೀಲ್ ಪಿಲ್ಲರ್ ಕುಸಿದಿದ್ದು, ಹೆಣ್ಣು ಮಗಳು ಹಾದು ಹೋಗುವಾಗ ಕಬ್ಬಿಣದ ಪಿಲ್ಲರ್ ತಲೆ ಮೇಲೆ ಬಿದ್ದು ಮೃ#ತಪಟ್ಟಿದ್ದಾರೆ. ಅದು ಅತ್ಯಂತ ದುರದೃಷ್ಟಕರ ವಿಷಯ. ಈ ಬಗ್ಗೆ ತನಿಖೆ ಮಾಡಿ, ಏನು ಕಾರಣ? ಯಾರು ಗುತ್ತಿಗೆದಾರ? ಎಲ್ಲವನ್ನೂ ಕೂಲಂಕಷವಾಗಿ ತನಿಖೆ ಮಾಡಲಾಗುವುದು. ಸಂಬಂಧಿಸಿವರ ಮೇಲೆ ಪ್ರಕರಣ ದಾಖಲಿಸಲು ಹೇಳಿದ್ದೇನೆ ಎಂದರು.

ಈ ಅವಘಡಕ್ಕೆ 40 ಪರ್ಸೆಂಟ್ ಕಮೀಷನ್‌ ಕಾರಣ ಎಂದು ಡಿಕೆಶಿ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದ ಬಸವರಾಜ ಬೊಮ್ಮಾಯಿ, ಕಾಮಾಲೆ ಕಣ್ಣಿಯಿಂದ ಎಲ್ಲವನ್ನು ನೋಡಿದರೇ ಹೀಗೆ. ಅವರ ಆಡಳಿತ ಕಾಲದಲ್ಲಿ ಏನೆಲ್ಲ ಆಗಿದೆ ಎಂಬುದನ್ನು ನೋಡಿಕೊಳ್ಳಲಿ ಎಂದರು.

Ads on article

Advertise in articles 1

advertising articles 2

Advertise under the article