
ಅದ್ಯಪಾಡಿ ಬೀಬಿಲಚ್ಚಿಲ್ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವದಲ್ಲಿ ಇನಾಯತ್ ಅಲಿ ಭಾಗಿ
Saturday, February 4, 2023
ಸುರತ್ಕಲ್: ಅದ್ಯಪಾಡಿ ಬೀಬಿಲಚ್ಚಿಲ್ ನಲ್ಲಿರುವ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಿನ್ನೆ ನಡೆದ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ ಗೋಪಾಲಕೃಷ್ಣ ಭಟ್, ಸಂಚಾಲಕರಾದ ಶ್ರೀ ಮೋನಪ್ಪ ಮೇಸ್ತ್ರಿರವರು ಉಪಸ್ಥಿತರಿದ್ದರು. ಇವರ ಜೊತೆಗೆ ಶ್ರೀ ವಿಶ್ವಾಸ್ ಕುಮಾರ್ ದಾಸ್, ಶ್ರೀ ಪೃಥ್ವಿರಾಜ್ ಆರ್.ಕೆ ಸೇರಿದಂತೆ ಇನ್ನಿತರರು ಇದ್ದರು.