ರಾಜ್ಯದಲ್ಲಿ ನ#ರಹಂ#ತಕ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ; ಕ್ಷೇತ್ರವಿಲ್ಲದೆ ಒದ್ದಾಟ: ನಳೀನ್​ ಕುಮಾರ್​ ಕಟೀಲ್ ಆಕ್ರೋಶ

ಕಾರವಾರ: ರಾಜ್ಯದಲ್ಲಿ ನ#ರಹಂ#ತಕ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಅವರಿಗೆ ಈ ಬಾರಿ ಸ್ಪರ್ಧಿಸಲು ಕ್ಷೇತ್ರವಿಲ್ಲದೆ ಒದ್ದಾಡುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್​ ಕುಮಾರ್​ ಕಟೀಲ್​​ ಹೇಳಿದ್ದಾರೆ.

ಕಾರವಾರದಲ್ಲಿ ಇಂದು ನಡೆದ ಬಿಜೆಪಿ ಅಭಿಯಾನ, ಮತಗಟ್ಟೆ ಪೇಜ್ ಪ್ರಮುಖರ ಸಮಾವೇಶ ಉದ್ಘಾಟಿಸಿ ಮಾತನಾಡುತ್ತಿದ್ದ ಅವರು, ಸಿದ್ದರಾಮಯ್ಯರನ್ನು ಬಾದಾಮಿ ಕ್ಷೇತ್ರದ ಜನರು ಓಡಿಸಿದ್ದಾರೆ. ಈ ಕಡೆ ಕೋಲಾರ ಕ್ಷೇತ್ರದ ಜನರು ಸಿದ್ದರಾಮಯ್ಯರನ್ನು ಜಾಡಿಸಿದ್ದು, ವರುಣಾ ಕ್ಷೇತ್ರದ ಜನ ಬರಬೇಡಿ ಅಂತ ಕಲ್ಲು ಹಿಡಿದು ನಿಂತಿದ್ದಾರೆ ಎಂದು ಕಿಡಿಕಾರಿದರು.

ನ#ರಹಂ#ತಕ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ  24 ಹಿಂದೂ ಕಾರ್ಯಕರ್ತರ ಹ#ತ್ಯೆಯಾದರೂ ಅವರಿಗೆ ಕಣ್ಣೀರು ಬರಲಿಲ್ಲ. PFIಗೆ ಬೆಂಬಲ ನೀಡಿ ಹಿಂದೂಗಳ ಕೊ#ಲೆಗೆ ಕಾರಣವಾದ ಸಿದ್ದರಾಮಯ್ಯರ ಕಾಲದಲ್ಲಿ 3,000 ರೈತರು ಆ#ತ್ಮಹ#ತ್ಯೆಗೆ ಶರಣಾದರು ಎಂದ ಕಟೀಲ್, ರಾಜ್ಯದಲ್ಲಿ ಕಾಂಗ್ರೆಸ್‌ನಿಂದಲೇ ಭ#ಯೋತ್ಪಾದನೆ ಪ್ರಾರಂಭವಾಗಿದ್ದು, ಕಾಂಗ್ರೆಸ್ ಉ#ಗ್ರ ಪಕ್ಷ ಎಂದು ಆರೋಪ ಮಾಡಿದರು.

ಇದೇ ವೇಳೆ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ ಕಟೀಲ್, ಕಣ್ಣೀರು ಹಾಕುವ ಮುಖ್ಯಮಂತ್ರಿ ಆಗಿದ್ದ ಹೆಚ್.ಡಿ.ಕುಮಾರಸ್ವಾಮಿ, ತಾಜ್ ಹೋಟೆಲ್‌ನಲ್ಲಿ ಕುಳಿತುಕೊಂಡು ಆಡಳಿತ ನಡೆಸಿದ್ದರಿಂದ ಅವರಿಗೆ ಜನರ ಕಷ್ಟ ಅರ್ಥ ಆಗಲಿಲ್ಲ ಎಂದರು.