
ತಮಿಳುನಾಡಿನಲ್ಲಿ ಉಚಿತ ಸೀರೆ, ಧೋತಿ ವಿತರಣೆ ವೇಳೆ ಕಾಲ್ತುಳಿತಕ್ಕೆ ನಾಲ್ವರು ಸಾ#ವು
Saturday, February 4, 2023
ಚೆನ್ನೈ: ತಮಿಳುನಾಡಿನ ತಿರುಪತ್ತೂರಿನ ವಾಣಿಯಂಬಾಡಿ ಎಂಬಲ್ಲಿ ಉಚಿತ ಸೀರೆ, ಧೋತಿಗಾಗಿ ಮಹಿಳೆಯರು ಮುಗಿಬಿದ್ದಿದ್ದರಿಂದ ಹಠಾತ್ ಕಾಲ್ತುಳಿತ ಸಂಭವಿಸಿದ್ದು ನಾಲ್ವರು ಮಹಿಳೆಯರು ಸಾ#ವನ್ನಪ್ಪಿದ್ದಾರೆ.
ತಮಿಳುನಾಡಲ್ಲಿ ತೈಪೂಸಂ ಎಂಬ ಹಬ್ಬ ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವಾಣಿಯಂಬಾಡಿಯ ಸ್ಥಳೀಯ ರಾಜಕೀಯ ಮುಖಂಡರೊಬ್ಬರು ಬಡವರಿಗೆ ಉಚಿತ ಸೀರೆ ಹಾಗು ಪಂಚೆ ವಿತರಿಸುವ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ವೇಳೆ ಉಚಿತವಾಗಿ ಸೀರೆ, ಪಂಚೆ ಪಡೆಯಲು ಬಂದ ಜನರು ಮುಗಿಬಿದ್ದ ಕಾರಣ ಕಾಲ್ತುಳಿತ ಸಂಭವಿಸಿ ನಾಲ್ವರು ಮೃ#ತಪಟ್ಟಿದ್ದಾರೆ ಎನ್ನಲಾಗುತ್ತಿದೆ.
ಕಾಲ್ತುಳಿತದಲ್ಲಿ ಪ್ರಾ#ಣ ಕ#ಳೆದುಕೊಂಡ ಮಹಿಳೆಯರ ಕುಟುಂಬಗಳಿಗೆ ಸಾಂತ್ವನ ಹೇಳಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್, ಪ್ರತಿ ಮಹಿಳೆಯ ಕುಟುಂಬಕ್ಕೆ ಎರಡು ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.