ನಾನೇ ಮುಂದಿನ ಮುಖ್ಯಮಂತ್ರಿ ಎಂದ ಬಸವರಾಜ ಬೊಮ್ಮಾಯಿ

ನಾನೇ ಮುಂದಿನ ಮುಖ್ಯಮಂತ್ರಿ ಎಂದ ಬಸವರಾಜ ಬೊಮ್ಮಾಯಿ

ಬಾಗಲಕೋಟೆ: ನಾನೇ ಮುಂದಿನ ಮುಖ್ಯಮಂತ್ರಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮಂಗಳವಾರ ಮುಧೋಳದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ ಅವರು, ಸಚಿವ ಮುರುಗೇಶ್​ ನಿರಾಣಿ ಅವರನ್ನು ನಗುನಗುತ್ತಲೇ ಕಾಲೆಳೆದ ವಿದ್ಯಮಾನ ನಡೆಯಿತು.

ರಾಜ್ಯದಲ್ಲಿ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲೇ ಬೊಮ್ಮಾಯಿ ನೀಡಿದ ಈ ಹೇಳಿಕೆ ಪಕ್ಷದಲ್ಲಿ ಚರ್ಚೆಗೆ ಗ್ರಾಸವಾಗುವ ಸಾಧ್ಯತೆ ಅಲ್ಲಗಳೆಯುವಂತಿಲ್ಲ. 

ಮುಧೋಳದ ಬೀಳಗಿಯಲ್ಲಿ ನೀರಾವರಿ ಸೇರಿದಂತೆ ನೂರಾರು ಅಭಿವೃದ್ಧಿ ಕಾರ್ಯಗಳಾಗಿದ್ದು, ಸಚಿವ ಮುರುಗೇಶ್​ ನಿರಾಣಿ ಅವರು ತನ್ನನ್ನು ಅಲ್ಲಿಗೆ ಕರೆದುಕೊಂಡು ಹೋಗಿಲ್ಲ, ನೀವು ಚಿಂತೆ ಮಾಡಬೇಡಿ, ನಾನು ಮತ್ತೆ ಮುಖ್ಯಮಂತ್ರಿಯಾಗಿ ಬೀಳಗಿಗೆ ಬರುತ್ತೇನೆ ಎಂದು ಬೊಮ್ಮಾಯಿ ಹೇಳಿದ್ದಾರೆ.

Ads on article

Advertise in articles 1

advertising articles 2

Advertise under the article