ನಿಟ್ಟೆ: ಮನೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಆರೋಪಿಯ ಬಂಧನ

ನಿಟ್ಟೆ: ಮನೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಆರೋಪಿಯ ಬಂಧನ

ಕಾರ್ಕಳ: ನಿಟ್ಟೆ ಗ್ರಾಮದ ಕೈಲಾಜೆ ಪಾದೆಮನೆ ರಾಘವೇಂದ್ರ ಭಟ್ ರವರ ಮನೆಯ ಐದೂವರೆ ಲಕ್ಷ ಬೆಲೆಬಾಳುವ ಚಿನ್ನದ ಆಭರಣಗಳು ಮತ್ತು ನಗದು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳನೋರ್ವನನ್ನು ಕಾರ್ಕಳ ಪೋಲೀಸರು ಬಂದಿಸಿದ್ದಾರೆ .

ತನಿಖೆ ಕೈಗೊಂಡ ಕಾರ್ಕಳ ವೃತ್ತ ನಿರೀಕ್ಷಕ ಟಿ.ಡಿ.ನಾಗರಾಜ್ ಮತ್ತು ಸಿಬ್ಬಂದಿಗಳ ತಂಡವು ಆರೋಪಿ ಹುಬ್ಬಳ್ಳಿ  ಮಾರುತಿ ನಗರದ 56ವರ್ಷದ ಚಂದ್ರಗೌಡ ಪಾಟೀಲ್ ಎಂಬಾತನನ್ನು ಬಂಧಿಸಿ, ಆತನಿಂದ ಕಳ್ಳತನ ಮಾಡಿದ್ದ 5.50 ಲಕ್ಷ ಮೌಲ್ಯದ ಚಿನ್ನದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ.

Ads on article

Advertise in articles 1

advertising articles 2

Advertise under the article