ಉಡುಪಿಯ ಜಿ.ಶಂಕರ್ ಮನೆ ಹಾಗೂ ಸಂಸ್ಥೆಗಳ ಮೇಲೆ ದಾಳಿ ನಡೆಸಿದ ಐಟಿ ಅಧಿಕಾರಿಗಳ ತಂಡ; ದಾಖಲೆಗಳ ಪರಿಶೀಲನೆ

ಉಡುಪಿಯ ಜಿ.ಶಂಕರ್ ಮನೆ ಹಾಗೂ ಸಂಸ್ಥೆಗಳ ಮೇಲೆ ದಾಳಿ ನಡೆಸಿದ ಐಟಿ ಅಧಿಕಾರಿಗಳ ತಂಡ; ದಾಖಲೆಗಳ ಪರಿಶೀಲನೆ

ಉಡುಪಿ: ಇಲ್ಲಿನ ಮೊಗವೀರ ಸಮುದಾಯದ ಮುಖಂಡ, ಖ್ಯಾತ ಉದ್ಯಮಿ ಜಿ.ಶಂಕರ್ ಅವರ ಮನೆ ಹಾಗೂ ಸಂಸ್ಥೆಗಳ ಮೇಲೆ ಆದಾಯ ತೆರಿಗೆ ಇಲಾಖಾ ಅಧಿಕಾರಿಗಳ ತಂಡ ಗುರುವಾರ ಬೆಳಗಿನ ಜಾವ ದಾಳಿ ನಡೆಸಿರುವ ಬಗ್ಗೆ ವರದಿಯಾಗಿದೆ.

ಈ ಬಾರಿಯ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಂತೆಯೇ  ಆದಾಯ ತೆರಿಗೆ ಇಲಾಖಾ ಅಧಿಕಾರಿಗಳು ದಾಳಿ ನಡೆದಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ. 

ಗುರುವಾರ ಬೆಳಗಿನ ಜಾವ 6 ಗಂಟೆ ಸುಮಾರಿಗೆ ಬೆಂಗಳೂರು ನೋಂದಣಿಯ ಕಾರಿನಲ್ಲಿ ಬಂದಿರುವ ಐಟಿ ಅಧಿಕಾರಿಗಳ ತಂಡ, ಏಕಕಾಲದಲ್ಲಿ ಜಿ.ಶಂಕರ್ ಮನೆ ಹಾಗೂ ಸಂಸ್ಥೆಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದೆ. ಈ ಪರಿಶೀಲನಾ ಕಾರ್ಯವು ಪೂರ್ವಾಹ್ನ 11 ಗಂಟೆಯವರೆಗೆ ನಡೆದಿದೆ ಎಂದು ಹೇಳಲಾಗಿದೆ. 

ಐಟಿ ಅಧಿಕಾರಿಗಳ ತಂಡವು ಸಂಸ್ಥೆಯ ಲೆಕ್ಕ ಪತ್ರ ಹಾಗು ನಗದು ವಹಿವಾಟಿನ ವಿವರ ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.


Ads on article

Advertise in articles 1

advertising articles 2

Advertise under the article