ನೇಜಾರು ನಾಲ್ವರ ಹತ್ಯಾಪ್ರಕರಣ: ಸ್ಫೋಟಕ ಮಾಹಿತಿ ಬಹಿರಂಗ ಪಡಿಸಿದ ಉಡುಪಿ ಎಸ್‌ಪಿ ಅರುಣ್

ನೇಜಾರು ನಾಲ್ವರ ಹತ್ಯಾಪ್ರಕರಣ: ಸ್ಫೋಟಕ ಮಾಹಿತಿ ಬಹಿರಂಗ ಪಡಿಸಿದ ಉಡುಪಿ ಎಸ್‌ಪಿ ಅರುಣ್

ಉಡುಪಿ: ನೇಜಾರಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಫೋಟಕ ಮಾಹಿತಿಗಳನ್ನು ಉಡುಪಿ ಎಸ್‌ಪಿ ಅರುಣ್ ಅವರು ಬಹಿರಂಗ ಪಡಿಸಿದ್ದಾರೆ.

ನೇಜಾರು ತೃಪ್ತಿ ನಗರದಲ್ಲಿ ನ.12 ರಂದು  ಹಸೀನಾ, ಆಫ್ನಾನ್, ಅಯ್ನಾಝ್, ಆಸಿಮ್ ಅವರನ್ನು ಆರೋಪಿ ಪ್ರವೀಣ್ ಚೌಗಲೆ ಮಾಡಿ ಪರಾರಿಯಾಗಿದ್ದ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಸ್‌ಪಿ ಅರುಣ್, ಆರೋಪಿ ನಾಲ್ವರ ಕೊಲೆಗೈದು ಚೂರಿಯನ್ನು ಅಡುಗೆ ಮನೆಯಲ್ಲಿ ಇಟ್ಟಿದ್ದ. ಪತ್ನಿಗೆ ಸಂಶಯ ಬಾರದ ಹಾಗೆ ಮನೆಯಲ್ಲಿ ಪ್ರವೀಣ್ ಚೌಗಲೆ ವರ್ತಿಸಿದ್ದ ಎಂದು ತಿಳಿಸಿದ್ದಾರೆ. 

ತನಿಖೆಗೆ ಬೇಕಾದ ಎಲ್ಲಾ ದಾಖಲಾತಿ ಪ್ರಕ್ರಿಯೆ ಈಗಾಗ್ಲೇ ನಡೆದಿದೆ. ಆರೋಪಿ ಪ್ರವೀಣ್ ಹಾಗು ಅಯ್ನಾಝ್  ಇಬ್ಬರಿಗೂ 8 ತಿಂಗಳಿಂದ ಪರಿಚಯ ಇತ್ತು. ಇಬ್ಬರ ಮಧ್ಯೆ ಗೆಳೆತನ ಇತ್ತು. ಆಯ್ನಾಸ್‌ ಕೆಲವು ಸಮಯಗಳಿಂದ ಪ್ರವೀಣ್ ಜೊತೆ  ಸರಿಯಾಗಿ ಮಾತನಾಡುತ್ತಿರಲಿಲ್ಲ. ಪೊಸೆಸಿವ್‌ನೆಸ್‌ನಿಂದ ಕೊಲೆ ಮಾಡಬೇಕೆಂದು ಪೂರ್ವ ಸಿದ್ಧತೆ ಮಾಡಿಕೊಂಡಿದ್ದ ಪ್ರವೀಣ್. ಆರಂಭದಲ್ಲಿ ಅಯ್ನಾಸ್‌ಗೆ ಮೊದಲ ಅಟ್ಯಾಕ್ ಮಾಡುತ್ತಾನೆ. ಹಸೀನಾ, ಅಫ್ನಾನ್, ಆಸಿಂಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ನಂತರ ಬೇರೆ ಬೇರೆ ವಾಹನದಲ್ಲಿ ಮಂಗಳೂರಿಗೆ ಪರಾರಿಯಾಗಿದ್ದಾನೆ. ಕೈ ಗಾಯಕ್ಕೆ ಚಿಕಿತ್ಸೆ ಪಡೆದು, ಚಾಕು ಮನೆಯಲ್ಲೇ ಇಟ್ಟು ಹೆಂಡತಿ ಜೊತೆ ಬೆಳಗಾವಿಗೆ ತೆರಳಿದ್ದಾನೆ. 

ಪ್ರವೀಣ್‌ಗೆ ಯಾವುದೇ ಕ್ರಿಮಿನಲ್ ಹಿನ್ನೆಲೆ ಇಲ್ಲ. 2007 ರಲ್ಲಿ ಪೂನಾ ಪೊಲೀಸ್ ಆಗಿದ್ದ, ಉತ್ತಮ ಸಂಬಳಕ್ಕಾಗಿ ಏರ್ ಇಂಡಿಯಾ ಎಕ್ಸ್ಪ್ರೆಸ್ ಸೇರಿದ್ದಾನೆ. ಅಮಲು ಪದಾರ್ಥ ಸೇವನೆ ಮಾಡಿದ್ದನೋ ಎಂಬ ಬಗ್ಗೆ ಮೆಡಿಕಲ್ ರಿಪೋರ್ಟ್ ಬರಲಿದೆ. ಒಂದೇ ಚಾಕುವಿನಲ್ಲಿ ನಾಲ್ವರ ಕೊಲೆಗೈದಿದ್ದಾನೆ. ಬೆಳಗಾವಿಯ ಕುಡುಚಿಯಲ್ಲಿ ಆರೋಪಿಗೆ ಆಶ್ರಯ ನೀಡಿದ ವ್ಯಕ್ತಿಯ ವಿಚಾರಣೆ ಮಾಡಿದ್ದೇವೆ. ಹೆಚ್ಚುವರಿ ಮಾಹಿತಿ ಬೇಕಾಗಿದ್ದರೆ ಅವರಿಂದ ಮಾಹಿತಿ ಪಡೆಯುತ್ತೇವೆ. ಕೈಗೆ ಗಾಯವಾಗಿದೆ ಎಂಬ ಬಗ್ಗೆ ಪತ್ನಿಗೆ ಸುಳ್ಳು ಹೇಳಿ ದಾರಿತಪ್ಪಿಸಿದ್ದಾನೆ. ಗಂಭೀರ ಪ್ರಕರಣ ಆಗಿರುವ ಕಾರಣ ಎಲ್ಲಾ ಮಾಹಿತಿ ಮಾಧ್ಯಮಕ್ಕೆ ಕೊಡಲು ಸಾಧ್ಯವಿಲ್ಲ. ಆರೋಪಿಗೆ ಪ್ರತ್ಯೇಕ ಸೆಲ್ ವ್ಯವಸ್ಥೆ ಮಾಡಲಾಗಿದೆ. ಇಬ್ಬರು ಪೊಲೀಸರ ಬಂದೋಬಸ್ತ್ ನಿಯೋಜನೆ ಆಗಿದೆ ಎಂದು ಎಸ್‌ಪಿ ಮಾಹಿತಿ ನೀಡಿದರು.

ಉಡುಪಿ ನಗರದಲ್ಲಿ ಹೆಚ್ಚುವರಿ ಸಿಸಿಟಿವಿ ಅಳವಡಿಕೆ ಮಾಡಲಾಗುವುದು. ಜಿಲ್ಲೆಯ ಎಲ್ಲಾ ಗಡಿಪ್ರದೇಶದಲ್ಲಿ ಸಿಸಿಟಿವಿ ಕಣ್ಗಾವಲು ಇರಿಸ್ತೇವೆ. ಆರೋಪಿ ಪ್ರವೀಣ್ ಮತ್ತು ಅಯ್ನಾಝ್ ಕುಟುಂಬ ತನಿಖೆಗೆ ಸಹಕಾರ ನೀಡಿದೆ. ನೂರ್ ಮೊಹಮ್ಮದ್ ಕುಟುಂಬ ಬಹಳ ನೋವಲ್ಲಿದ್ದಾರೆ. ವಿಶೇಷ ಪಿ.ಪಿ ನೇಮಕಕ್ಕೆ ನಾವು ಸಹಕಾರ ನೀಡುತ್ತೇವೆ. ಫಾಸ್ಟ್ ಟ್ರ‍್ಯಾಕ್ ಕೋರ್ಟ್ ಬಗ್ಗೆ ಕುಟುಂಬ ಮನವಿ ನೀಡಿದೆ. ತನಿಖೆಗೆ ಒಟ್ಟು 11 ತಂಡ ರಚನೆ ಮಾಡಿದ್ದೆವು. ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಕೆಲಸ ಮಾಡಿದ್ದಾರೆ. ಎಲ್ಲಾ ಕಡೆಯಿಂದ ಮಾಹಿತಿ ಬಂದ ಕಾರಣ ಎಲ್ಲವನ್ನು ತನಿಖೆ ಮಾಡಿದ್ದೇವೆ ಎಂದು ಅವರು ಹೇಳಿದರು.

ಚಾರ್ಜ್‌ಶೀಟ್‌ ಸಲ್ಲಿಕೆಗೆ ಇನ್ನೂ 70-80 ದಿನ ಇದೆ. ಎಲ್ಲಾ ಸಾಕ್ಷಿಗಳ ಸಂಗ್ರಹ ಮಾಡುತ್ತಿದ್ದೇವೆ. ಸುಮಾರು 50 ಪೊಲೀಸರು ಇದರ ಹಿಂದೆ ಕೆಲಸ ಮಾಡಿದ್ದಾರೆ. ಒಂದು ಆಪ್ ಮೂಲಕ ಆಯ್ನಾಝ್ ಮನೆಯನ್ನು ಪ್ರವೀಣ್ ಕಂಡು ಹುಡುಕಿದ್ದಾನೆ. ಆಪ್ ಲೊಕೇಶನ್ ಮೂಲಕ ಆರೋಪಿ ಮನೆಗೆ ಬಂದಿದ್ದಾನೆ. ಆರೋಪಿ ಕೃತ್ಯಕ್ಕೆ ಮೊದಲು ಮನೆಗೆ ಬಂದಿರಲಿಲ್ಲ. ಹೆಚ್ಚುವರಿ ತಾಂತ್ರಿಕ ಮಾಹಿತಿಗಳನ್ನು ನಾವು ಕೊಡುವುದಿಲ್ಲ. ಚಾರ್ಜ್‌ಶೀಟ್‌ನಲ್ಲಿ ನ್ಯಾಯಾಲಯಕ್ಕೆ ಎಲ್ಲಾ ಮಾಹಿತಿಗಳನ್ನು ಒಪ್ಪಿಸುತ್ತೇವೆ. ಆರೋಪಿ ಪತ್ತೆ ಮಾಡಿದ ಪೊಲೀಸರಿಗೆ ಸೂಕ್ತ ಬಹುಮಾನ ನೀಡಲಾಗುವುದು. ಇಲಾಖೆಗೆ 1.50 ಲಕ್ಷ ರೂ. ಬಹುಮಾನ ಕೊಡುವ ಬಗ್ಗೆ ಶಿಫಾರಸ್ಸು ಮಾಡಿದ್ದೇನೆ ಎಂದು ಎಸ್‌ಪಿ ಅರುಣ್ ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article