ರವಿವಾರ ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಅವರು ಪಾಲ್ಗೊಂಡು ಮಾತನಾಡಿದರು.
ಈ ಸಂಧರ್ಭದಲ್ಲಿ ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಸಭೆಯಲ್ಲಿ ಚರ್ಚೆ ನಡೆಸಲಾಯಿತು. ಪ್ರಾಧಿಕಾರ, ಅಕಾಡೆಮಿ ಹಾಗೂ ಸರ್ಕಾರದ ವಿವಿಧ ಸಮಿತಿಗಳಿಗೆ ನೇಮಕಗೊಂಡ ಬ್ಲಾಕ್ ವ್ಯಾಪ್ತಿಯ ಸದಸ್ಯರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.

