![ಕಾಂಗ್ರೆಸ್ ಪ್ರಚಾರ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸೊರಕೆಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ಕಾಂಗ್ರೆಸ್ ಪ್ರಚಾರ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸೊರಕೆಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ](https://blogger.googleusercontent.com/img/b/R29vZ2xl/AVvXsEhETfZrxHF-Nd17YiCtou2TlaUklWarWIg047xnOPDkhonhvmaIpMMOTc-0WIv_-dr_1fDEIX-AJCvSw-AlizvJst_L9Rs3LXx9BcdwRVMlUQyjDS6xKVeOS9glmIxFJkRv9wJc6ZDZ8_Xvu24ehDct8yq304cIXv3FxbeDukPM3K-Stw4ES8QGpxMzR9sO/w640-h348/ab08139a-b1c0-4f1e-a041-bf6f1273fb73.jpg)
ಕಾಂಗ್ರೆಸ್ ಪ್ರಚಾರ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸೊರಕೆಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ
Friday, March 29, 2024
ಮಂಗಳೂರು: ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ಉಡುಪಿಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರು ವಿನಯ್ ಕುಮಾರ್ ಸೊರಕೆ ಅವರನ್ನು ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ NSUI ಜಿಲ್ಲಾಧ್ಯಕ್ಷರಾದ ಸೌರಭ್ ಬಲ್ಲಾಳ್, ನಾಯಕರಾದ ಯತೀಶ್ ಕರ್ಕೇರ, ಶರತ್ ಶೆಟ್ಟಿ, ಸತೀಶ್ ಕುಮಾರ್ ಮಂಚಿ, ಸಂಧ್ಯಾ ತಿಲಕ್ ರಾಜ್, ಸೂರಜ್ ಕರ್ಕೇರ, ಪ್ರದೀಪ್, ಶೆರಾನ್, ಸುಜನ್, ಫುರ್ಖಾನ್ ಇನ್ನಿತರರು ಉಪಸ್ಥಿತರಿದ್ದರು.