ಸಮನ್ವಯ ಸರ್ವಧರ್ಮ ಸಮಿತಿ ತೊಟ್ಟಂ ವತಿಯಿಂದ ವಡಭಾಂಡೇಶ್ವರ ಬಲರಾಮ ದೇವಸ್ಥಾನಕ್ಕೆ ಸೌಹಾರ್ದ ಭೇಟಿ

ಸಮನ್ವಯ ಸರ್ವಧರ್ಮ ಸಮಿತಿ ತೊಟ್ಟಂ ವತಿಯಿಂದ ವಡಭಾಂಡೇಶ್ವರ ಬಲರಾಮ ದೇವಸ್ಥಾನಕ್ಕೆ ಸೌಹಾರ್ದ ಭೇಟಿ

ಉಡುಪಿ: ನೂರಾರು ವರ್ಷ ಇತಿಹಾಸ ಹೊಂದಿರುವ ವಡಭಾಂಡೇಶ್ವರ ಬಲರಾಮ ದೇವರಿಗೆ ನಡೆದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಯುಕ್ತ ನಡೆದ ರಥೋತ್ಸವ ಕಾರ್ಯಕ್ರಮದಲ್ಲಿ  ಸಮನ್ವಯ ಸರ್ವಧರ್ಮ ಸಮಿತಿ ತೊಟ್ಟಂ ಇದರ ಸದಸ್ಯರು ಭಾಗವಹಿಸಿ ಸೌಹಾರ್ದತೆಯ ಸಂದೇಶವನ್ನು ವಿನಿಮಯ ಮಾಡಿಕೊಂಡರು.



ಈ ಸಂದರ್ಭದಲ್ಲಿ ಮಾತನಾಡಿದ ತೊಟ್ಟಂ ಚರ್ಚಿನ ಧರ್ಮಗುರು ಡೆನಿಸ್ ಡೆಸಾ ಅವರು, ಎಲ್ಲಾ ಧರ್ಮಗಳೂ ಶಾಂತಿ ಮತ್ತು ಪ್ರೀತಿಯನ್ನು ಭೋಧಿಸುತ್ತವೆ. ತೊಟ್ಟಂ ಸಮನ್ವಯ ಸರ್ವಧರ್ಮ ಸಮಿತಿ ಇದೇ ಉದ್ದೇಶದಿಂದ ಕಾರ್ಯಾಚರಿಸುತ್ತಿದ್ದು ಸಮಾಜದಲ್ಲಿ ಶಾಂತಿ ಸೌಹಾರ್ಧತೆಯನ್ನು ಬಯಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಮ್ಮ ವ್ಯಾಪ್ತಿಯಲ್ಲಿ ನೂರಾರು ವರ್ಷಗಳ ಇತಿಹಾಸ ಹೊಂದಿರುವ ವಡಭಾಂಡೇಶ್ವರ ಬಲರರಾಮ ದೇವಸ್ಥಾನ ಜೀರ್ಣೋದ್ಧಾರಗೊಂಡು ಅದರ ಅಷ್ಟಬಂಧ ಬ್ರಹ್ಮಕಲಶೋತ್ಸವದಲ್ಲಿ ಭಾಗವಹಿಸಿ ಪರಸ್ಪರ ಸೌಹಾರ್ದತೆಯ ಸಂದೇಶವನ್ನು ವಿನಿಮಯ ಮಾಡಿಕೊಂಡಿರುತ್ತೇವೆ. ಇಂತಹ ಕಾರ್ಯಕ್ರಮಗಳು ಸಮಾಜದಲ್ಲಿ ಸೌಹಾರ್ದತೆ ಸಾರಲು ಸಹಾಯಕವಾಗುತ್ತದೆ ಎಂದರು.

ಸಮನ್ವಯ ಸರ್ವಧರ್ಮ ಸಮಿತಿ ತೊಟ್ಟಂ ಇದರ ಪಧಾಧಿಕಾರಿಗಳು ಹಾಗೂ ಸದಸ್ಯರಿಗೆ ವಡಭಾಂಡೇಶ್ವರ ಬಲರರಾಮ ದೇವಸ್ಥಾನದ ವತಿಯಿಂದ ಗೌರವಿಸಲಾಯಿತು.

ಈ ವೇಳೆ ದೇವಸ್ಥಾನದ ಶಶಿಧರ ಎಂ ಅಮೀನ್, ಟಿ ಶ್ರೀನಿವಾಸ ಭಟ್ , ನಾಗರಾಜ್ ಮೂಲ್ಕಿ, ಸಾಧು ಸಾಲ್ಯಾನ್, ಪ್ರಕಾಶ್ ಜಿ ಕೊಡವೂರು, ಶಂಕರನಾರಾಯಣ ಐತಾಳ್, ಸಮನ್ವಯ ಸೌಹಾರ್ಧ ಸಮಿತಿಯ ಅಧ್ಯಕ್ಷ ರಮೇಶ್ ತಿಂಗಳಾಯ, ಕಾರ್ಯದರ್ಶಿ ಲೆಸ್ಲಿ ಅರೋಜಾ, ಡಿಕನ್ ಸ್ಟೀಫನ್ ರೊಡ್ರಿಗಸ್, ಸಿಸ್ಟರ್ ಡಯಾನ, ಗ್ಲಾಡ್ಸನ್ ಮಾಬೇನ್, ವನಿತಾ ಫೆರ್ನಾಂಡಿಸ್, ಆಗ್ನೆಲ್ ಫೆರ್ನಾಂಡಿಸ್, ಪ್ರಭಾಕರ್, ಶೋಭಾ, ವಿನೋದ್ ಉಪಸ್ಥಿತರಿದ್ದರು.

ಇದೇ ವೇಳೆ ಸಮನ್ವಯ ಸೌಹಾರ್ಧ ಸಮಿತಿಯ ಸದಸ್ಯರು ಶ್ರೀ ಪಂಡರಿನಾಥ ವಿಠೋಭ ಭಜನಾ ಮಂದಿರ ಬಡಾನಿಡಿಯೂರು ತೊಟ್ಟಂ ಇದರ 77 ನೇ ವಾರ್ಷಿಕ ಅಂಖಡ ಭಜನಾ ಮಹಾಮಂಗಲೋತ್ಸವ ಕಾರ್ಯಕ್ರಮದಲ್ಲಿ ಕೂಡ ಭಾಗವಹಿಸಿ ಶುಭಾಶಯ ವಿನಿಮಯ ಮಾಡಿಕೊಂಡರು.

Ads on article

Advertise in articles 1

advertising articles 2

Advertise under the article