ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪರ ಮರಕಡದಲ್ಲಿ ಮತಯಾಚನೆ ನಡೆಸಿದ ಇನಾಯತ್ ಅಲಿ

ದಕ್ಷಿಣಕನ್ನಡ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್. ಪೂಜಾರಿ ಅವರ ಪರವಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿಯವರು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮರಕಡ 14ನೇ ವಾರ್ಡ್‌ನಲ್ಲಿ ಮನೆ ಮನೆಗೆ ಭೇಟಿ ನೀಡಿ  ಮತಯಾಚನೆ ನಡೆಸಿದರು. ಈ ವೇಳೆ ಅವರಿಗೆ ನೂರಾರು ಕಾರ್ಯಕರ್ತರು ಸಾಥ್ ನೀಡಿದರು.