ಚಿಕ್ಕಮಗಳೂರುನಲ್ಲಿ ಭರ್ಜರಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ

ಚಿಕ್ಕಮಗಳೂರುನಲ್ಲಿ ಭರ್ಜರಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ

ಚಿಕ್ಕಮಗಳೂರು: ಉಡುಪಿ-ಚಿಕ್ಕಮಗಳೂರು ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಅವರ ಪ್ರಚಾರ ಕಾರ್ಯ ಭರದಿಂದ ಸಾಗುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತಯಾಚನೆ ಜೋರಾಗಿದೆ.


ಶುಕ್ರವಾರ ಸಂಜೆ ಚಿಕ್ಕಮಗಳೂರಿನ ಸಖರಾಯಪಟ್ಟಣ  ಹೋಬಳಿಯ ಹುಲಿಕೆರೆ ಗ್ರಾಮದಲ್ಲಿ ಕೆ.ಜಯಪ್ರಕಾಶ್ ಹೆಗ್ಡೆ  ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಶಾಸಕರಾದ ತಮ್ಮಯ್ಯ ಮತ್ತು ವಿಧಾನ ಪರಿಷತ್ತಿನ  ಮಾಜಿ ಸದಸ್ಯೆ ಗಾಯತ್ರಿ ಶಾಂತೆಗೌಡ, ಬ್ಲಾಕ್ ಕಾಂಗ್ರೆಸ್  ಅಧ್ಯಕ್ಷರು, ಸಖರಾಯಪಟ್ಟಣ ಹೋಬಳಿ ಭಾಗದ ಕಾಂಗ್ರೆಸ್ ನ ಎಲ್ಲಾ ಘಟಕದ ಅಧ್ಯಕ್ಷರುಗಳು, ಸದಸ್ಯರು, ಕಾರ್ಯಕರ್ತರು  ಭಾಗವಹಿಸಿದ್ದರು.


ಇದಕ್ಕೂ ಮೊದಲು ಚಿಕ್ಕಮಗಳೂರಿನ ಸಖರಾಯಪಟ್ಟಣ  ಹೋಬಳಿಯ ಚಿಕ್ಕದೇವನೂರು ಗ್ರಾಮದಲ್ಲಿ ಮತಯಾಚನೆ ಮಾಡಲಾಯಿತು. ಈ ಸಂದರ್ಭದಲ್ಲಿ ಕೆ.ಜಯಪ್ರಕಾಶ್ ಹೆಗ್ಡೆ ಅವರ ಜೊತೆ ಶಾಸಕರಾದ ತಮ್ಮಯ್ಯ ಮತ್ತು ವಿಧಾನ ಪರಿಷತ್ತಿನ  ಮಾಜಿ ಸದಸ್ಯೆ ಶ್ರೀಮತಿ  ಗಾಯತ್ರಿ ಶಾಂತೆಗೌಡ ರವರು, ಬ್ಲಾಕ್ ಕಾಂಗ್ರೆಸ್  ಅಧ್ಯಕ್ಷರು,ಸಖರಾಯಪಟ್ಟಣ ಹೋಬಳಿ ಭಾಗದ  ಕಾಂಗ್ರೆಸ್ ನ ಎಲ್ಲಾ ಘಟಕಅಧ್ಯಕ್ಷರುಗಳು, ಸದಸ್ಯರು,ಕಾರ್ಯಕರ್ತರು   ಭಾಗವಹಿಸಿದ್ದರು. 



ಚಿಕ್ಕಮಗಳೂರಿನ ಸಖರಾಯಪಟ್ಟಣ  ಹೋಬಳಿಯ ನಿಡಘಟ್ಟ ಗ್ರಾಮದಲ್ಲಿ ಜಯಪ್ರಕಾಶ್ ಹೆಗ್ಡೆ ಚುನಾವಣೆ ಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಶಾಸಕರಾದ  ತಮ್ಮಯ್ಯ ಮತ್ತು ವಿಧಾನ ಪರಿಷತ್ತಿನ  ಮಾಜಿ ಸದಸ್ಯೆ ಗಾಯತ್ರಿ ಶಾಂತೆಗೌಡ ರವರು ಬ್ಲಾಕ್ ಕಾಂಗ್ರೆಸ್  ಅಧ್ಯಕ್ಷರು ಸಖರಾಯಪಟ್ಟಣ ಹೋಬಳಿ ಭಾಗದ  ಕಾಂಗ್ರೆಸ್ ನ ಎಲ್ಲಾ ಘಟಕದ  ಅಧ್ಯಕ್ಷರುಗಳು, ಸದಸ್ಯರು , ಕಾರ್ಯಕರ್ತರು  ಭಾಗವಹಿಸಿದ್ದರು. 

Ads on article

Advertise in articles 1

advertising articles 2

Advertise under the article