'ಈದ್​ ದಿನಗಳಲ್ಲಿ ನಮ್ಮ ಮನೆಯಲ್ಲಿ ಅಡುಗೆ ಮಾಡುತ್ತಿರಲಿಲ್ಲ, ಮುಸ್ಲಿಂ ಕುಟುಂಬದಲ್ಲಿ ಮಾಡಿದ್ದ ಅಡುಗೆಯನ್ನೇ ಊಟ ಮಾಡುತ್ತಿದ್ದೆವು'; ನಾನು ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ: ಪ್ರಧಾನಿ ಮೋದಿ

'ಈದ್​ ದಿನಗಳಲ್ಲಿ ನಮ್ಮ ಮನೆಯಲ್ಲಿ ಅಡುಗೆ ಮಾಡುತ್ತಿರಲಿಲ್ಲ, ಮುಸ್ಲಿಂ ಕುಟುಂಬದಲ್ಲಿ ಮಾಡಿದ್ದ ಅಡುಗೆಯನ್ನೇ ಊಟ ಮಾಡುತ್ತಿದ್ದೆವು'; ನಾನು ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ: ಪ್ರಧಾನಿ ಮೋದಿ

ದೆಹಲಿ: ನಾನು ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ, ಹೆಚ್ಚು ಮಕ್ಕಳನ್ನು ಹೊಂದಿರುವವರು ಎಂದ ಮಾತ್ರಕ್ಕೆ ಅದು ಮುಸ್ಲಿಮರೇ ಎಂದು ನೀವು ಅರ್ಥೈಸಿಕೊಳ್ಳುವುದೇಕೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದ್ದಾರೆ. 

ನಾನು ವೋಟ್​ ಬ್ಯಾಂಕ್​ ರಾಜಕಾರಣ ಮಾಡಲು ಇಲ್ಲಿ ಬಂದಿಲ್ಲ, ಸಬ್​ ಕಾ ಸಾಥ್ ಸಬ್​ ಕಾ ವಿಕಾಸ್ ಎಂದು ಎಲ್ಲಾ ಧರ್ಮದವರನ್ನು ಒಟ್ಟಿಗೆ ಕೊಂಡೊಯ್ಯುವುದೇ ನನ್ನ ಗುರಿ ಎಂದರು.

ಹೆಚ್ಚು ಮಕ್ಕಳಿರುವಲ್ಲಿ ಬಡತನವಿದೆ, ನಿಮ್ಮ ಮಕ್ಕಳನ್ನು ಬೇರೆಯವರು ನೋಡಿಕೊಳ್ಳುವ ಪರಿಸ್ಥಿತಿ ಬರಬಾರದು ಎಂದರು. 2002ರಲ್ಲಿ ಗುಜರಾತ್‌ನಲ್ಲಿ ನಡೆದ ಗೋಧ್ರಾ ಗಲಭೆಯ ನಂತರ ತಾವು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ, ತಮ್ಮ ವಿರೋಧಿಗಳು ಮುಸ್ಲಿಮರಿಗೆ ನನ್ನ ಮೇಲಿದ್ದ ಗೌರವವನ್ನು ಹಾಳು ಮಾಡುವ ಕೆಲಸ ಮಾಡಿದ್ದಾರೆ.

ಆಗ ಈದ್​ ದಿನಗಳಲ್ಲಿ ನಮ್ಮ ಮನೆಯಲ್ಲಿ ಅಡುಗೆ ಮಾಡುತ್ತಿರಲಿಲ್ಲ, ಮುಸ್ಲಿಂ ಕುಟುಂಬದಲ್ಲಿ ಮಾಡಿದ್ದ ಅಡುಗೆಯನ್ನೇ ಊಟ ಮಾಡುತ್ತಿದ್ದೆವು. ಇಂದಿಗೂ ಅನೇಕ ಮುಸ್ಲಿಂ ಸ್ನೇಹಿತರಿದ್ದಾರೆ ಎಂದರು. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಮರು ತಮಗೆ ಮತ ಹಾಕುತ್ತಾರೆಯೇ ಎಂಬ ಪ್ರಶ್ನೆಗೆ ದೇಶದ ಜನತೆ ಮತ ಹಾಕುತ್ತಾರೆ ಎಂದು ಮೋದಿ ಉತ್ತರಿಸಿದರು.

ನಾನು ಹಿಂದೂ-ಮುಸ್ಲಿಂ ಎಂದು ಭೇದ ಭಾವ ಮಾಡಿದರೆ ಅಂದಿನಿಂದ ನನಗೆ ಸಾರ್ವಜನಿಕ ಕ್ಷೇತ್ರದಲ್ಲಿ ನಿಲ್ಲಲು ಅವಕಾಶವಿರುವುದಿಲ್ಲ ಎಂದು ಹೇಳಿದರು.

ಮೋದಿ ಮೊದಲು ಹೇಳಿದ್ದೇನು? ಹೆಚ್ಚು ಮಕ್ಕಳನ್ನು ಹೊಂದಿರುವ ಜನರು ಆಸ್ತಿಯಲ್ಲಿ ಹೆಚ್ಚಿನ ಹಕ್ಕುಗಳನ್ನು ಪಡೆಯಬೇಕೆಂದು ಕಾಂಗ್ರೆಸ್ ಬಯಸುತ್ತದೆ ಎಂದು ಹೇಳಿದ್ದರು. ಇದೇ ವೇಳೆ ದೇಶದ ಸಂಪತ್ತನ್ನು ದೇಶದ ನುಸುಳುಕೋರರಿಗೆ ಹಂಚಲು ಕಾಂಗ್ರೆಸ್ ಬಯಸುತ್ತಿದೆ ಎಂದಿದ್ದರು.

ಅಧಿಕಾರಕ್ಕೆ ಬಂದರೆ ಸಂಪತ್ತನ್ನು ಮರುಹಂಚಿಕೆ ಮಾಡುವ ಕಾಂಗ್ರೆಸ್‌ನ ಉದ್ದೇಶದ ಬಗ್ಗೆ ವರದಿಗಳನ್ನು ಉಲ್ಲೇಖಿಸಿದ ಪ್ರಧಾನಿ, ಪಕ್ಷವು ಸಮೀಕ್ಷೆಯನ್ನು ನಡೆಸುತ್ತದೆ ಮತ್ತು ಅವರು ಮಹಿಳೆಯರ ಬಳಿ ಇರುವ ಮಂಗಳಸೂತ್ರವನ್ನು ಸಹ ಬಿಡುವುದಿಲ್ಲ ಮತ್ತು ಈ ಮಟ್ಟಕ್ಕೆ ಹೋಗುತ್ತಾರೆ ಎಂದು ಹೇಳಿದ್ದರು.

Ads on article

Advertise in articles 1

advertising articles 2

Advertise under the article