ಉಡುಪಿ: ನೆರೆ ನೀರಿನ ಸೆಳೆತಕ್ಕೆ ಕೊಚ್ಚಿಹೋದ ಕಾರು; ಮೂವರು ಅಪಾಯದಿಂದ ಪಾರು

ಉಡುಪಿ: ನೆರೆ ನೀರಿನ ಸೆಳೆತಕ್ಕೆ ಕೊಚ್ಚಿಹೋದ ಕಾರು; ಮೂವರು ಅಪಾಯದಿಂದ ಪಾರು

ಉಡುಪಿ: ನೆರೆ ನೀರಿನ ಸೆಳೆತಕ್ಕೆ ಕಾರೊಂದು ಕೊಚ್ಚಿಹೋದ ಘಟನೆ ಉಡುಪಿ ಕನ್ನರ್ಪಾಡಿಯಲ್ಲಿ ಇಂದು ನಡೆದಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಳೆ ನೀರು ಸಾಗುವ ತೋಡಿನ ಸಮೀಪ ಸಾಗುತ್ತಿದ್ದ ಕಾರು‌ ಏಕಾಏಕಿ ನೀರಿನ ಸೆಳೆತಕ್ಕೆ ಕೊಚ್ಚಿಹೋಗಿದೆ. ಕಾರಿನಲ್ಲಿದ್ದ ಮೂವರು ಪ್ರಯಾಣಿಕರು‌ ಕಾರಿನ ಬಾಗಿಲು ಒಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕದಳ‌ ಸಿಬಂದಿ ಕೊಚ್ಚಿಹೋದ ಕಾರನ್ನು ಮೇಲಕ್ಕೆತ್ತುವಲ್ಲಿ ಯಶಸ್ವಿಯಾಗಿದ್ದಾರೆ.

Ads on article

Advertise in articles 1

advertising articles 2

Advertise under the article