ಜನವರಿ 18ರಂದು ಅಡ್ವೆ ಹೊನಲು ಬೆಳಕಿನ ಜೋಡುಕೆರೆ ಕಂಬಳ; ಪೂರ್ವಭಾವಿ ಸಭೆಯಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ
Tuesday, December 31, 2024
ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ ಸಮಿತಿಯ ವತಿಯಿಂದ ಜನವರಿ 18 ರಂದು ನಡೆಯಲಿರುವ "ಹೊನಲು ಬೆಳಕಿನ ಕೋಟಿ ಚೆನ್ನಯ್ಯ ಕಂಬಳ" ಇದರ ಪೂರ್ವ ಸಿದ್ಧತಾ ಸಭೆಯಲ್ಲಿ ಮಂಗಳವಾರ ಶಾಸಕರು, ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ ಸಮಿತಿಯ ಗೌರವಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಕೋಟಿ ಚೆನ್ನಯ್ಯ ಜೋಡುಕೆರೆ ಕಂಬಳ ಸಮಿತಿಯ ಕಾರ್ಯಾಧ್ಯಕ್ಷರಾದ ಕೊಳಚೊರು ಕೊಂಡೆಟ್ಟು ಸುಕುಮಾರ ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ನವೀನ್ ಚಂದ್ರ ಸುವರ್ಣ, ಕಾರ್ಯದರ್ಶಿಗಳಾದ ಉದಯ್ ರೈ, ಕೋಶಾಧಿಕಾರಿಗಳಾದ ಲಕ್ಷ್ಮಣ್ ಎಲ್ ರೈ, ಜೊತೆ ಕೋಶಾಧಿಕಾರಿಗಳಾದ ಸತೀಶ್ ಶೆಟ್ಟಿ ಅಡ್ವೆ ಮುಡ್ರಗುತ್ತು ಹಾಗೂ ರವೀಂದ್ರ ಪ್ರಭು, ಪ್ರವೀಣ್ ಪೂಜಾರಿ ಅಡ್ವೆ, ಗಣೇಶ್ ಶೆಟ್ಟಿ ಸಾಂತೂರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.