ಉಡುಪಿ: ಎಳ್ಳಮವಾಸ್ಯೆ ಪ್ರಯುಕ್ತ ಸಾವಿರಾರು ಜನರಿಂದ ಸಮುದ್ರ ಸ್ನಾನ

ಉಡುಪಿ: ಎಳ್ಳಮವಾಸ್ಯೆ ಪ್ರಯುಕ್ತ ಸಾವಿರಾರು ಜನರಿಂದ ಸಮುದ್ರ ಸ್ನಾನ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಇಂದು ಎಳ್ಳಮವಾಸ್ಯೆಯನ್ನು ಸಂಪ್ರದಾಯಬದ್ದವಾಗಿ ಆಚರಿಸಲಾಯ್ತು. ಎಳ್ಳಮವಾಸ್ಯೆಯಂದು ಪಿತೃಗಳಿಗೆ ಪಿಂಡ ಬಿಡುವುದು ಸಂಪ್ರದಾಯ. ಜೊತೆಗೆ ಎಳ್ಳಮವಾಸ್ಯೆಯಂದು ಸಮುದ್ರ ಸ್ನಾನ ಮಾಡಿದ್ರೆ ಸಕಲ ಚರ್ಮರೋಗ ನಿವಾರಣೆಯಾಗುತ್ತೆ ಎಂಬ ನಂಬಿಕೆ ಜನರಲ್ಲಿದೆ.

ಈ ದಿನದಂದು ಸಮುದ್ರ ಸ್ನಾನ ಮಾಡುವುದು ಸಂಪ್ರದಾಯ. ಬೆಳಗ್ಗೆಯಿಂದಲೇ ಸಾವಿರಾರು ಮಂದಿ ಮಲ್ಪೆಯಲ್ಲಿ ಸಮುದ್ರ ಸ್ನಾನ ಮಾಡಿದರು. ಪಿತೃಗಳಿಗೆ ಎಳ್ಳಮವಾಸ್ಯೆಯಂದು ಪಿಂಡಪ್ರದಾನ ಮಾಡಿದ್ರೆ ಅವರ ಆತ್ಮ ಸದ್ಗತಿಯನ್ನು ಪಡೆಯುತ್ತದೆ- ಆತ್ಮಕ್ಕೆ ಪುಣ್ಯಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ.

ಉಡುಪಿ ನಗರ ಮಾತ್ರವಲ್ಲದೆ , ಜಿಲ್ಲೆಯ ಮೂಲೆ ಮೂಲೆಗಳಿಂದಲೂ ಜನರು ಬಂದಿದ್ದರು. ಜನರ ಅನುಕೂಲಕ್ಕಾಗಿ ನೂರಾರು ವೈದಿಕರು ಹಾಜರಿದ್ದು ಪಿಂಡಪ್ರದಾನದ ಸಂಪ್ರದಾಯಗಳನ್ನು ನಡೆಸಿಕೊಟ್ಟರು. ಪಿಂಡಪ್ರದಾನ ಮಾಡಿದ ಬಳಿಕ ಸಮುದ್ರದಲ್ಲಿ ಅರ್ಗ್ಯ ಬಿಟ್ಟು ಸ್ನಾನ ಮಾಡಿ, ಅಲ್ಲೇ ಪಕ್ಕದಲ್ಲಿರುವ ಒಡಬಾಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

Ads on article

Advertise in articles 1

advertising articles 2

Advertise under the article