ಕಚೇರಿಯಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ ಪ್ರಕರಣ; ಡಿವೈಎಸ್​ಪಿ ರಾಮಚಂದ್ರಪ್ಪಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಕಚೇರಿಯಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ ಪ್ರಕರಣ; ಡಿವೈಎಸ್​ಪಿ ರಾಮಚಂದ್ರಪ್ಪಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ತುಮಕೂರು:  ಕಚೇರಿಯಲ್ಲಿ ಮಹಿಳೆ ಜೊತೆ ಅಸಭ್ಯ ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್​ಪಿ (DySP) ರಾಮಚಂದ್ರಪ್ಪಗೆ ಒಟ್ಟು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಮಧುಗಿರಿ ಜೆಎಂಎಫ್​ಸಿ ಕೋರ್ಟ್ ಶನಿವಾರ ಆದೇಶ ಹೊರಡಿಸಿದೆ. 

ಸೋಮವಾರದವರೆಗೂ ಮಧುಗಿರಿ ಜೈಲಿನಲ್ಲಿರುವ ಡಿವೈಎಸ್ ಪಿ ರಾಮಚಂದ್ರಪ್ಪ, ಆ ಬಳಿಕ ತುಮಕೂರು ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್​ ಮಾಡಲು ಆದೇಶಿಸಲಾಗಿದೆ.

ಜಿಲ್ಲೆಯ ಮಧುಗಿರಿ ಉಪವಿಭಾಗ ಡಿವೈಎಸ್ ಪಿ ಕಚೇರಿಗೆ ಪಾವಗಡ ಮೂಲದ ಮಹಿಳೆಯೊಬ್ಬರು ತಮ್ಮ ಜಮೀನಿನ ವ್ಯಾಜ್ಯ ವಿಚಾರಕ್ಕೆ ಮಧುಗಿರಿ ಡಿವೈಎಸ್​ಪಿ ರಾಮಚಂದ್ರಪ್ಪಗೆ ದೂರು ನೀಡಲು ಬಂದಿದ್ದರು. ಈ ವೇಳೆ ಡಿವೈಎಸ್​​ಪಿ ಆಕೆಯನ್ನ ಪುಸಲಾಯಿಸಿ ಕಚೇರಿಯಲ್ಲಿರುವ ಆ್ಯಂಟಿ ಚೇಂಬರ್​​ಗೆ ಕರೆದೊಯ್ದು ಬಲವಂತವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರು. ಈ ಕೃತ್ಯ ಮೊಬೈಲ್​​ಯಲ್ಲಿ ಸೆರೆಯಾಗಿದ್ದು, ಎಲ್ಲೆಡೆ ಸಿಕ್ಕಾಪಟ್ಟೆ ವೈರಲ್ ಆಗಿತ್ತು.

ಯಾವಾಗ ತಮ್ಮ ಕಚೇರಿಯಲ್ಲಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಮಾಡಿದರೋ ಡಿವೈಎಸ್​ಪಿ ವಿರುದ್ಧ ಸಾಕಷ್ಟು ಆಕ್ರೋಶ ಕೇಳಿಬಂತು. ಅಲ್ಲದೇ ಪ್ರಕರಣವನ್ನ ಗಂಭೀರವಾಗಿ ತೆಗೆದುಕೊಂಡ ತುಮಕೂರು ಎಸ್​​ಪಿ ಅಶೋಕ್ ವೆಂಕಟ್ ರಿಪೋರ್ಟ್ ತರಿಸಿಕೊಂಡು ಮೇಲಾಧಿಕಾರಿಗಳಿಗೆ ಕಳಿಸಿದ್ದಾರೆ. ಕೂಡಲೇ ಸಂಜೆ ವೇಳೆಗೆ ಡಿಜಿ ಆ್ಯಂಡ್​ ಐಜಿಪಿ ಅಲೋಕ್ ಮೋಹನ್ ರಾಸಲಿಲೆ ಪ್ರಕರಣ ಕಂಡು ಡಿವೈಎಸ್​​ಪಿ ರಾಮಚಂದ್ರಪ್ಪರನ್ನ ಅಮಾನತು ಮಾಡಿದ್ದರು. ಇನ್ನೂ ಇದಾದ ಬಳಿಕ ನೊಂದ ಮಹಿಳೆ ನೀಡಿದ ದೂರಿನ ಮೇರೆಗೆ ಮನೆಯಲ್ಲಿಯೇ ಇದ್ದ ಡಿವೈಎಸ್​ಪಿ ರಾಮಚಂದ್ರಪ್ಪರನ್ನ ಮಧುಗಿರಿ ಪೊಲೀಸರು ಬಂಧಿಸಿದ್ದರು.

ಅತ್ಯಾಚಾರ ಕೇಸ್ ಅಡಿ ದೂರು ದಾಖಲಿಸಿಕೊಂಡು ರಾಮಚಂದ್ರಪ್ಪರನ್ನ ಬಂಧಿಸಿ ಮಧುಗಿರಿ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಬಳಿಕ ಮೆಡಿಕಲ್​ಗಾಗಿ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಮೆಡಿಕಲ್ ಚೆಕಪ್ ಮಾಡಿಸಿದ್ದಾರೆ. ಇನ್ನೂ ಇದಾದ ಬಳಿಕ ಮಧುಗಿರಿ ಜೆಎಂಎಫ್​ಸಿ ಕೋರ್ಟ್ ಜಡ್ಜ್ ‌ಬಳಿ ಹಾಜರುಪಡಿಸಿದ್ದರು. ಇದೀಗ ಮಧುಗಿರಿ ಜೆಎಂಎಫ್​ಸಿ ನ್ಯಾಯಾಲಯದಿಂದ 14 ದಿನ ನ್ಯಾಯಾಂಗ ಬಂಧನ ನೀಡ ಆದೇಶ ಹೊರಡಿಸಲಾಗಿದೆ.

Ads on article

Advertise in articles 1

advertising articles 2

Advertise under the article