ಕೇರಳ ಸಿಎಂ ಪಿಣರಾಯಿ ವಿಜಯನ್ ಸನಾತನ ಹಿಂದೂ ಧರ್ಮದ ಶತ್ರು: ಸುನೀಲ್ ಕುಮಾರ್​​ ಕಿಡಿ

ಕೇರಳ ಸಿಎಂ ಪಿಣರಾಯಿ ವಿಜಯನ್ ಸನಾತನ ಹಿಂದೂ ಧರ್ಮದ ಶತ್ರು: ಸುನೀಲ್ ಕುಮಾರ್​​ ಕಿಡಿ

ಬೆಂಗಳೂರು: ಸಮಾಜ ಸುಧಾರಕ ನಾರಾಯಣ ಗುರುಗಳನ್ನು ಸನಾತನ ಧರ್ಮದ ಶತ್ರು ಎಂದು ಬಿಂಬಿಸುವ ಮೂಲಕ ಕೇರಳ ಸಿಎಂ ಪಿಣರಾಯಿ ವಿಜಯನ್​ ಅವಮಾನಿಸಿದ್ದಾರೆ. ಹೀಗಾಗಿ ಪಿಣರಾಯಿ ವಿಜಯನ್ ಸನಾತನ ಹಿಂದೂ ಧರ್ಮದ ಶತ್ರು ಎಂದು ಶಾಸಕ ವಿ. ಸುನೀಲ್ ಕುಮಾರ್​​ ಕಿಡಿಕಾರಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಶಾಸಕ ವಿ. ಸುನೀಲ್ ಕುಮಾರ್​​, ನಾರಾಯಣ ಗುರುಗಳನ್ನು ಅವಮಾನಿಸು ಮೂಲಕ ಪಿಣರಾಯಿ ವಿಜಯನ್ ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಅವರ ಹೇಳಿಕೆ ದುರುದ್ದೇಶಪೂರಿತ. ತರ್ಕಬದ್ಧ ಚಿಂತನೆಯನ್ನು ಉತ್ತೇಜಿಸುವ ನೆಪದಲ್ಲಿ ಹಿಂದೂ ನಂಬಿಕೆಗಳನ್ನು ಅವಮಾನಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸನಾತನ ಧರ್ಮವನ್ನು ದ್ವೇಷಿಸಬೇಕು ಎಂಬುದು ವಿಜಯನ್ ಅವರು ಶಿವಗಿರಿ ಸಮಾವೇಶದಲ್ಲಿನ ಭಾಷಣದ ತಿರುಳಾಗಿದೆ. ಅವರ ಹೇಳಿಕೆ ಹಿಂದೂಗಳನ್ನು ಘಾಸಿಗೊಳಿಸಿದೆ. ಅವರ ಮಾತುಗಳು ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂಬ ಉದಯನಿಧಿ ಸ್ಟಾಲಿನ್ ಹೇಳಿಕೆ ಮುಂದುವರಿದ ಭಾಗದಂತಿದೆ ಎಂದಿದ್ದಾರೆ.

ಹಿಂದೂಗಳ ಮೇಲೆ ನಿರಂತರ ದಾಳಿ, ದಬ್ಬಾಳಿಕೆ, ಕೊಲೆಯಂತಹ ಪೈಶಾಚಿಕ ಕೃತ್ಯ ನಡೆಸಿಕೊಂಡು ಹಿಂದೂಗಳ ಮೇಲಿನ ಅಕ್ರಮಣವನ್ನು ಪೋಷಿಸಿದ ಫ್ಯಾಸಿಸ್ಟ್ ಪಿಣರಾಯಿ ನೇತೃತ್ವದ ಕೇರಳ ಸರ್ಕಾರ ಇದೀಗ ಹಿಂದೂ ಧರ್ಮ ಪ್ರತಿಪಾದಕರನ್ನು ನಿಂದಿಸಿ, ಧರ್ಮದ ಅವಹೇಳನಕ್ಕೆ ಮುಂದಾಗಿದೆ. ಹಿಂದೂ ಸಮಾಜ ಸುಧಾರಕರ ವಿರುದ್ಧ ಕೇರಳ ಸರ್ಕಾರ ಮಾತನಾಡಲು ಆರಂಭಿಸಿದೆ. ಕೇರಳ ಸಿಎಂ ವಿರುದ್ಧ ಸಮಸ್ತ ಹಿಂದೂಗಳು ತರಾಟೆಗೆ ತೆಗೆದುಕೊಂಡು ಅವರ ವಿರುದ್ದ ಎದ್ದೇಳಬೇಕು ಎಂದು ಹೇಳಿದ್ದಾರೆ.

ಹಿಂದೂ ಧರ್ಮ ಪ್ರತಿಪಾದಕರ ಬಗ್ಗೆ ಬಾಲಿಶ: ಹೇಳಿಕೆ ನೀಡುವ ಪಿಣರಾಯಿ ವಿಜಯನ್​ಗೆ ಅನ್ಯ ಧರ್ಮದ ಧರ್ಮಗುರುಗಳ ಬಗ್ಗೆೆ ಇಂತಹ ಮಾತುಗಳನ್ನು ಹೇಳಲು ಧೈರ್ಯವಿದೆಯೇ? ಈ ಹಿಂದೆ ಶಬರಿಮಲೆಯ ಅಯ್ಯಪ್ಪ ಸನ್ನಿಧಿಯಲ್ಲಿ ಹಿಂದೂಗಳ ನಂಬಿಕೆಗೆ ಸವಾಲು ಹಾಕಲು ಪಿಣರಾಯಿ ಯತ್ನಿಸಿದ್ದರು.

ಇದೀಗ ನಾರಾಯಣ ಗುರುಗಳು ಸನಾತನ ಧರ್ಮದ ವಕ್ತಾರರೂ ಅಲ್ಲ, ಸಾಧಕರೂ ಅಲ್ಲ ಎಂದು ಪುಣ್ಯಭೂಮಿ ಶಿವಗಿರಿಯಲ್ಲಿ ಹೇಳಿ ಸನಾತನ ಧರ್ಮ ಮತ್ತು ನಾರಾಯಣ ಗುರುಗಳ ಧಾರ್ಮಿಕ ಮೌಲ್ಯಗಳನ್ನು ತುಳಿಯುವ ನೀಚ, ಹೀನ ಕೃತ್ಯಕ್ಕೆ ಇಳಿದಿದೆ. ಇದು ಇಡೀ ಹಿಂದೂ ಸಮಾಜಕ್ಕೆ ಪಿಣರಾಯಿ ಮಾಡಿದ ಮಹಾದ್ರೋಹ ಎಂದು ಹರಿಹಾಯ್ದಿದ್ದಾರೆ.

Ads on article

Advertise in articles 1

advertising articles 2

Advertise under the article