
ಅದಮಾರು ಪೂರ್ಣ ಪ್ರಜ್ಞ ಕಾಲೇಜಿನ 1995ರ ವಿಜ್ಞಾನ ವಿಭಾಗದ ಹಳೆ ವಿದ್ಯಾರ್ಥಿಗಳಿಂದ ಗುರು ನಮನ ಕಾರ್ಯಕ್ರಮ
ಅದಮಾರು ಪೂರ್ಣ ಪ್ರಜ್ಞ ಪದವಿ ಪೂರ್ವ ಕಾಲೇಜಿನ 1995ರ ವಿಜ್ಞಾನ ವಿಭಾಗದ ಹಳೆ ವಿದ್ಯಾರ್ಥಿಗಳಿಂದ ರವಿವಾರ ಕಾಲೇಜಿನಲ್ಲಿ ಗುರು ನಮನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಈಶಪ್ರಿಯತೀರ್ಥ ಸ್ವಾಮೀಜಿಯವರು ದೀಪ ಬೆಳಗಿಸಿ ಉದ್ಘಾಟಿಸಿ, ಆಶೀರ್ವದಿಸಿದರು. ಸಭೆಯ ಅಧ್ಯಕ್ಷತೆಯನ್ನು ನಿವೃತ್ತ ಪ್ರಾಂಶುಪಾಲರಾದ ನಾಗರತ್ನ ರಾವ್ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಉದಯ ಶೆಟ್ಟಿ, ಕಾಲೇಜು ವಿಭಾಗದ ನಿವೃತ್ತ ಉಪನ್ಯಾಸಕರು ಹಾಗೂ ಹೈಸ್ಕೂಲ್ ವಿಭಾಗದ ಶಿಕ್ಷಕರು ಭಾಗವಹಿಸಿದ್ದರು. ಅವರನ್ನು ಹಳೆ ವಿದ್ಯಾರ್ಥಿಗಳಿಂದ ಸನ್ಮಾನಿಸಲಾಯಿತು. 25ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ (ಕೊರೊನ) ಹಳೆ ವಿದ್ಯಾರ್ಥಿಗಳಿಂದ ಶಾಲೆಯ ವಿದ್ಯಾ ನಿಧಿಗೆ ಸುಮಾರು 1.7 ಲಕ್ಷ ರೂಪಾಯಿ ದೇಣಿಗೆ ನೀಡಲಾಗಿತ್ತು. ಅದನ್ನು ಈ ವೇಳೆ ಸ್ಮರಿಸಿದರು. ಪ್ರಾಧ್ಯಾಪಕರು ಹಿತನುಡಿಗಳೊಂದಿಗೆ ಹಳೆ ವಿದ್ಯಾರ್ಥಿಗಳನ್ನು ಹಾರೈಸಿದರು. ಎಲ್ಲರೂ ಭೋಜನ ಸ್ವೀಕರಿಸಿ ಕಾರ್ಯ ಕ್ರಮವನ್ನು ಉತ್ತಮ ರೀತಿಯಲ್ಲಿ ನಡೆಸಿ ಕೊಟ್ಟರು.