
ಕೇಂದ್ರ ಸ್ವದೇಶ್ ದರ್ಶನ್ ಯೋಜನೆಯಡಿ ಕಾರ್ಕಳದ ಆನೆಕೆರೆ, ರಾಮಸಮುದ್ರ ಅಭಿವೃದ್ಧಿ: ಸಚಿವ ಗಜೇಂದ್ರ ಸಿಂಗ್ ಶೇಖಾವತ್
Thursday, May 8, 2025
ಉಡುಪಿ: ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಕಾರ್ಕಳಕ್ಕೆ ಭೇಟಿ ನೀಡಿದರು. ಕಾರ್ಕಳ ಆನೆಕೆರೆ ಬಸದಿ ಮತ್ತು ರಾಮಸಮುದ್ರ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಸ್ಥಳದ ಕುರಿತಾಗಿ ಮೆಚ್ಚುಗೆ ವ್ಯಕ್ತಪಡಿಸಿದರು. ಶಾಸಕ ಸುನಿಲ್ ಕುಮಾರ್ ಸಚಿವರಿಗೆ ಪ್ರವಾಸೋದ್ಯಮವಾಗಿ ಅಭಿವೃದ್ಧಿಪಡಿಸುವ ನೀಲನಕಾಶೆ ಬಗ್ಗೆ ತಿಳಿಸಿ, ಮಾತುಕತೆ ನಡೆಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಸ್ವದೇಶ್ ದರ್ಶನ್ ಯೋಜನೆ ಭಾಗವಾಗಿ ಕಾರ್ಕಳ ಆನೆಕೆರೆ ಮತ್ತು ರಾಮಸಮುದ್ರ ಪ್ರದೇಶವನ್ನು ಎರಡು ಹಂತಗಳಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕ ಸುನಿಲ್ ಕುಮಾರ್, ಪುರಸಭೆ ಅಧ್ಯಕ್ಷ ಯೊಗೀಶ್ ದೇವಾಡಿಗ, ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ, ಎಸಿ ರಶ್ಮಿ, ತಹಶೀಲ್ದಾರ್ ಪ್ರದೀಪ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.