
ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರ: ನೂತನ ಅಧ್ಯಕ್ಷರಾಗಿ ಮಹೇಶ್ ಅಂಚನ್ ಆಯ್ಕೆ
Friday, June 27, 2025
ಉಡುಪಿ: ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಕ್ಷೇತ್ರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಮಹೇಶ್ ಅಂಚನ್ ಆಯ್ಕೆಗೊಂಡಿದ್ದಾರೆ.
ಇಂದು ನಡೆದ ಕ್ಷೇತ್ರ ಆಡಳಿತ ಮಂಡಳಿಯ ಸದಸ್ಯರ ಸಭೆಯಲ್ಲಿ ಮಹೇಶ್ ಅಂಚನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಹೇಶ್ ಅಂಚನ್ ಸಾಮಾಜಿಕ ಮತ್ತು ಧಾರ್ಮಿಕ ಕ್ಷೇತ್ರದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು. ಕಟಪಾಡಿ ಗಣೇಶೋತ್ಸವ ಸಮಿತಿ, ಮಟ್ಟು ಗಣೇಶೋತ್ಸವ ಸಮಿತಿ, ಜೆ ಸಿ ಐ ಕಟಪಾಡಿ, ಯುವ ವಾಹಿನಿ, ತನ್ನನ್ನು ತೊಡಗಿಸಿಕೊಂಡಿದ್ದು ಸಮಾಜಿಕ ಕಾರ್ಯದಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು
ಇವರ ಹಿರಿಯರು ಕೂಡ ಕಟಪಾಡಿ ವಿಶ್ವನಾಥ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದರು ಬಿಲ್ಲವ ಸಮುದಾಯದ ಶಕ್ತಿ ಕೇಂದ್ರ ಎಂದೇ ಕರೆಯುವ ವಿಶ್ವನಾಥ ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದು ಮುಂದಿನ ದಿನ ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ದೇವಸ್ಥಾನದ ಅಭಿವೃದ್ಧಿಯಲ್ಲಿ ತನ್ನನ್ನು ತೊಡಗಿಸಿಕೊಳ್ಳುತ್ತಿದ್ದಾರೆ