
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಶೇ.100 ಫಲಿತಾಂಶಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ
ಸರಕಾರಿ ಪದವಿ ಪೂರ್ವ ಕಾಲೇಜು, ಪಲಿಮಾರು ಇದರ 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 100 ಶೇಖಡಾ ಫಲಿತಾಂಶಗಳಿಸಿದ ವಿಧ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಮಂಗಳವಾರ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ಸಂಸ್ಥೆಯ ಪ್ರವೇಶದ್ವಾರದ ನಾಮಫಲಕವನ್ನು ಉದ್ಘಾಟಿಸಿದರು.
ಶಾಸಕರು ಮಾತ್ನಾಡಿ, ವಿದ್ಯಾರ್ಥಿಗಳು ಕಲಿತು ಮೆಂದೆ ದೊಡ್ಡ ವ್ಯಕ್ತಿಯಾದಾಗ ತಾನು ಕಲಿತ ಶಾಲೆ, ವಿದ್ಯೆ ಕಲಿಸಿದ ಗುರುಗಳು ಮತ್ತು ಜನ್ಮಕೊಟ್ಟ ತಂದೆ ತಾಯಿಯನ್ನು ಎಂದಿಗೂ ಮರೆಯಬಾರದು ಎಂದು ಹೇಳಿದ ಅವರು ನಿಮ್ಮ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಶುಭಹಾರೈಸಿದರು.
ಈ ಸಂದರ್ಭದಲ್ಲಿ ಪಲಿಮಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸೌಮ್ಯಲತಾ ಶೆಟ್ಟಿ, ಉಪಾಧ್ಯಕ್ಷರಾದ ರಾಯೇಶ್ ಪೈ, ಕಾಪು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪುಂಡಲೀಕ ಮರಾಠೆ, ದಾಯ್ಜಿವರ್ಲ್ಡ್ ಮೀಡಿಯಾ ಸ್ಥಾಪಕರಾದ ವಾಲ್ಟರ್ ನಂದಳಿಕೆ, ಹಳೆ ವಿದ್ಯಾರ್ಥಿ ದಾನಿಗಳಾದ ಡಾl ಪ್ರಭಾ ನಂಬಿಯಾರ್, ಪಲಿಮಾರು ಗ್ರಾಮ ಪಂಚಾಯತ್ ಸದಸ್ಯರಾದ ಸುಜಾತಾ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಪ್ರಸಾದ್ ಪಲಿಮಾರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷರಾದ ಶೋಭಾ, ಪ್ರಾಂಶುಪಾಲರು, ಹಿರಿಯ ಸಹಶಿಕ್ಷಕರು, ಅಧ್ಯಾಪಕರು, ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.