
ಮೂಳೂರು ಅಲ್-ಇಹ್ಸಾನ್ ಕಬಡ್ಡಿ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
Wednesday, August 13, 2025
ಕಾಪು: ಶಾಲಾ ಶಿಕ್ಷಣ ಇಲಾಖೆ ಉಡುಪಿ ವಲಯ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಮುದರಂಗಡಿ ಇವರ ಸಹಯೋಗದಲ್ಲಿ ನಡೆದ 17ರ ವಯೋಮಾನದ ಬಾಲಕರ ಕಬಡ್ಡಿ ಪಂದ್ಯಾಟದಲ್ಲಿ ಮೂಳೂರು ಅಲ್-ಇಹ್ಸಾನ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟಕ್ಕೆ ಆಯ್ಕೆಯಾಗಿದೆ.
ಅಲ್ ಇಹ್ಸಾನ್ ಎಜುಕೇಷನಲ್ ಸಮಿತಿಯ ಮುಖ್ಯಸ್ಥ ಅನ್ವರ್ ಹುಸೈನ್ ಗೂಡಿನಬಳಿ, ಸಂಸ್ಥೆಯ ಅಡಳಿತಾಧಿಕಾರಿಗಳಾದ ಪ್ರೊಫೆಸರ್ ಯೂಸೂಫ್, ಪ್ರಾಂಶುಪಾಲರಾದ ಕೆ.ಎಸ್. ಹಬೀಬುರ್ರಹ್ಮಾನ್, ಪ್ರೌಢಶಾಲಾ ಮೇಲ್ವಿಚಾರಕರಾದ ಖಲಂದರ್ ಶಾಫಿ, ದೈಹಿಕ ಶಿಕ್ಷಣ ಶಿಕ್ಷಕರಾದ ಬಶೀರ್ ಎಂ., ಸದ್ದಾಂ ಹುಸೇನ್ ಮತ್ತು ಸುಮನ ಕಿಶೋರ್ ವಿದ್ಯಾರ್ಥಿಗಳೊಂದಿಗೆ ಕಾಣಬಹುದು.