ಎಲ್ಲವನ್ನು ಪಕ್ಕಕ್ಕಿಟ್ಟು ಬಿಲ್ಲವರು-ಮೊಗವೀರರು ಒಂದಾಗಬೇಕು: ನಾಡೋಜ ಡಾ.ಜಿ.ಶಂಕರ್

ಎಲ್ಲವನ್ನು ಪಕ್ಕಕ್ಕಿಟ್ಟು ಬಿಲ್ಲವರು-ಮೊಗವೀರರು ಒಂದಾಗಬೇಕು: ನಾಡೋಜ ಡಾ.ಜಿ.ಶಂಕರ್

'ಮಂಗಳೂರು ದಸರಾ ಗೌರವ ಸಮ್ಮಾನ್ -2025' ಪ್ರಶಸ್ತಿ ಸ್ವೀಕರಿಸಿದ ನಾಡೋಜ ಡಾ.ಜಿ.ಶಂಕರ್

ಮಂಗಳೂರು: ಎಲ್ಲವನ್ನು ಪಕ್ಕಕ್ಕಿಟ್ಟು ಬಿಲ್ಲವರು ಮತ್ತು ಮೊಗವೀರ ಸಮಾಜ ರಾಜಕೀಯ ರಹಿತವಾಗಿ ಒಂದಾಗಬೇಕು ಎಂದು ದ.ಕ.ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ, ಮೊಗವೀರ ರತ್ನ, ನಾಡೋಜ ಡಾ.ಜಿ.ಶಂಕರ್ ಕರೆ ನೀಡಿದ್ದಾರೆ.

ಮಂಗಳೂರು ದಸರಾದ ಗೌರವ ಸಮ್ಮಾನ್ 2025 ಪ್ರಶಸ್ತಿ ಸ್ವೀಕರಿಸಲು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಆಗಮಿಸಿದ ಅವರು ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ವಂದಿಸಿದ ಬಳಿಕ ಮಾತನಾಡುತ್ತಿದ್ದರು.

ಬಿಲ್ಲವ ಮತ್ತು ಮೊಗವೀರ ಸಮಾಜದ ನಡುವೆ ರಾಜಕೀಯ ಪ್ರಜ್ಞೆಯ ಕೊರತೆಯಿಂದ ಬಿಲ್ಲವ ಸಮಾಜದ ಅಭ್ಯರ್ಥಿಗಳು ಚುನಾವಣೆ ನಿಂತಾಗ ಮೊಗವೀರ ಸಮಾಜ ಸ್ಪಂದಿಸಲಿಲ್ಲ ಅದೇ ರೀತಿ ಮೊಗವೀರ ಸಮಾಜ ಚುನಾವಣೆಗೆ ನಿಂತಾಗ ಬಿಲ್ಲವ ಸಮಾಜ ಸ್ಪಂದಿಸಲಿಲ್ಲ. ಇದರಿಂದಾಗಿ ಬಿಲ್ಲವ ಮತ್ತು ಮೊಗವೀರ ಸಮಾಜಕ್ಕೆ ಸರಿಯಾದ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ. ಇದರಿಂದ ಸಮಾಜದ ಅಭಿವೃದ್ಧಿಗೆ ತೊಂದರೆ ಆಗುತ್ತದೆ. ಮುಂದಿನ ದಿನಗಳಲ್ಲಿ ಬಿಲ್ಲವ ಮತ್ತು ಮೊಗವೀರ ಸಮಾಜದ ವ್ಯಕ್ತಿಗಳು ಯಾವುದೇ ಪಕ್ಷದಲ್ಲಿ ನಿಂತರೂ ಪಕ್ಷ ಭೇದ ಮರೆತು ಒಂದಾಗ ಬೇಕು ಎಂದು ಡಾ.ಜಿ.ಶಂಕರ್ ಕರೆ ನೀಡಿದರು.

ಈ ಸಂದರ್ಭ ಕ್ಷೇತ್ರದ ಅಧ್ಯಕ್ಷ ಜಯರಾಜ್ ಸೋಮಸುಂದರಂ, ಕಾರ್ಯದರ್ಶಿ ಮಾಧವ ಸುವರ್ಣ, ಕೋಶಾಧಿಕಾರಿ ಪದ್ಮರಾಜ್ ಆರ್. ಪೂಜಾರಿ, ಟ್ರಸ್ಟಿಗಳಾದ ಕಿಶೋರ್ ದಂಡಕೇರಿ, ಕೃತಿನ್ ಅಮೀನ್, ಅಭಿವೃದ್ಧಿ ಸಮಿತಿ ಸದಸ್ಯ ಹಾಗೂ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಚಂದನ್‌ದಾಸ್, ಲೀಲಾಕ್ಷ ಕರ್ಕೇರ, ರಮಾನಾಥ ಕಾರಂದೂರು, ರಾಧಾಕೃಷ್ಣ, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article