ಮಧ್ಯಪ್ರದೇಶ; ಕೆಮ್ಮಿನ ಸಿರಪ್ ಸೇವಿಸಿ ಮತ್ತೆ 6 ಮಕ್ಕಳು ಸಾವು: ಮೃತರ ಸಂಖ್ಯೆ 20ಕ್ಕೆ ಏರಿಕೆ

ಮಧ್ಯಪ್ರದೇಶ; ಕೆಮ್ಮಿನ ಸಿರಪ್ ಸೇವಿಸಿ ಮತ್ತೆ 6 ಮಕ್ಕಳು ಸಾವು: ಮೃತರ ಸಂಖ್ಯೆ 20ಕ್ಕೆ ಏರಿಕೆ

ಭೋಪಾಲ್: ಮಧ್ಯಪ್ರದೇಶದಲ್ಲಿ ಮಾರಕ ಕೆಮ್ಮಿನ ಸಿರಪ್  ಸೇವಿಸಿ ಮೂತ್ರಪಿಂಡ ವೈಫಲ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಮತ್ತೆ 6 ಮಕ್ಕಳು ಸಾವನ್ನಪ್ಪಿದ್ದು, ರಾಜ್ಯದಲ್ಲಿ ಸಾವನ್ನಪ್ಪಿದ ಮಕ್ಕಳ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

ಈ ಮೊದಲು ಮಧ್ಯಪ್ರದೇಶದ ಛಿಂದ್ವಾಡದ 14 ಮಕ್ಕಳು ವಿಷಕಾರಿ ಕೆಮ್ಮಿನ ಸಿರಪ್ ಸೇವಿಸಿದ್ದರಿಂದ ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ದೃಢಪಡಿಸಿತ್ತು. ಅದಾದ ಬಳಿಕ ಮತ್ತೆ ಮಂಗಳವಾರ (ಅ.7) ಛಿಂದ್ವಾಡದಲ್ಲಿ 4 ಹಾಗೂ ಬೇತುಲ್‌ನಲ್ಲಿ 2 ಮಕ್ಕಳು ಸಾವನ್ನಪ್ಪಿವೆ. ಇನ್ನೂ 6 ಮಕ್ಕಳು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, 5 ಮಕ್ಕಳ ಸ್ಥಿತಿ ಗಂಭೀರವಾಗಿದೆ.

ಸಿರಪ್ ಸೇವಿಸಿ ಅಸ್ವಸ್ಥರಾದ ಮಕ್ಕಳ ಚಿಕಿತ್ಸೆಯ ಖರ್ಚನ್ನು ತಾನೇ ಭರಿಸುವುದಾಗಿ ಮಧ್ಯಪ್ರದೇಶ ಸರ್ಕಾರ ಘೋಷಿಸಿದೆ. ಈಗಾಗಲೇ ಔಷಧಿ ಉತ್ಪಾದಕ ಕಂಪನಿಗೆ ತಮಿಳುನಾಡು ಸರ್ಕಾರ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಇನ್ನೂ ಪಂಜಾಬ್ ಸರ್ಕಾರ ಕೂಡ ಸಿರಪ್ ಅನ್ನು ನಿಷೇಧಿಸಿದೆ. ಇದರೊಂದಿಗೆ ಪಂಜಾಬ್ ಸಿರಪ್ ನಿಷೇಧಿಸಿದ 6ನೇ ರಾಜ್ಯವಾಗಿ ಹೊರಹೊಮ್ಮಿದೆ. ಸಿರಪ್ ಕುರಿತು ಸಿಬಿಐ ತನಿಖೆಗೆ ಸುಪ್ರೀಂ ಕೋರ್ಟಿಗೂ ಅರ್ಜಿ ಸಲ್ಲಿಸಲಾಗಿದೆ.

Ads on article

Advertise in articles 1

advertising articles 2

Advertise under the article