ಕಾಪುವಿನ ಉಳಿಯರಗೋಳಿಯಲ್ಲಿ ಸೊರಕೆ ನೇತೃತ್ವದಲ್ಲಿ ಬೃಹತ್ ಉದ್ಯೋಗ ಮೇಳ; 3886 ಅಭ್ಯರ್ಥಿಗಳು ಭಾಗಿ; ಉದ್ಯೋಗ ಪಡೆದ 1898 ಮಂದಿ

ಕಾಪುವಿನ ಉಳಿಯರಗೋಳಿಯಲ್ಲಿ ಸೊರಕೆ ನೇತೃತ್ವದಲ್ಲಿ ಬೃಹತ್ ಉದ್ಯೋಗ ಮೇಳ; 3886 ಅಭ್ಯರ್ಥಿಗಳು ಭಾಗಿ; ಉದ್ಯೋಗ ಪಡೆದ 1898 ಮಂದಿ

ಕಾಪು: ಕಾಪುವಿನ ಉಳಿಯರಗೋಳಿಯ ದಂಡತೀರ್ಥ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶನಿವಾರ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಉಡುಪಿ ಜಿಲ್ಲೆಯ ವತಿಯಿಂದ ರಾಜ್ಯ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯಕುಮಾರ್ ಸೊರಕೆ ನೇತೃತ್ವದಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಿತು.

ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಮಾತನಾಡಿ, ಯುವಕ, ಯುವತಿಯರು ನಿರುದ್ಯೋಗ ಸಮಸ್ಯೆ ಎದುರಿಸುತ್ತಿದ್ದಾರೆ. ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡುವ ಉದ್ದೇಶದಿಂದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಇದರ ಪ್ರಯೋಜವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಭಾಗವಹಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಗೆ ತಕ್ಕಂತೆ ಉದ್ಯೋಗ ನೀಡಲಾಗುವುದು. ಅಲ್ಲದೆ ಯಾವ ಕಂಪೆನಿಯಲ್ಲಿ ಉದ್ಯೋಗ ಬಯಸುತ್ತಾರೋ ಅದನ್ನು ಪಡೆಯಲು ಅವಕಾಶವಿದ್ದು, ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಯಾಯ ಕಂಪೆನಿಗಳು ಇಂದೇ ನೇಮಕಾತಿ ಪತ್ರ ನೀಡುವ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್ ಮಾತನಾಡಿ, ಜಿಲ್ಲೆಯಲ್ಲಿ ಶೈಕ್ಷಣಿಕವಾಗಿ ಮುಂದುವರಿದಿದ್ದು, ಬಹಳಷ್ಟು ಕೈಗಾರಿಕೆಗಳು ಸ್ಥಾಪನೆಯಾಗಿದೆ. ಆದರೆ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕಾಗಿದೆ. ಇಂದು ಈಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುತ್ತಿರುವುದು ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಇಂತಹ ಉದ್ಯೋಗ ಮೇಳವನ್ನು ಆಯೋಜಿಸುವ ಮೂಲಕ ಮಾದರಿಯಾಗಿದೆ ಎಂದರು.










ಉದ್ಯೋಗ ಮೇಳವನ್ನು ಕಾಪು ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮನೋಹರ ಎಸ್ ಶೆಟ್ಟಿ ಉದ್ಘಾಟಿಸಿ ಶುಭಹಾರೈಸಿದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್, ಮುನಿಯಾಳು ಉದಯಕುಮಾರ್ ಶೆಟ್ಟಿ, ದಿನೇಶ್ ಹೆಗ್ಡೆ ಮೊಳಹಳ್ಳಿ, ಶುಭಧಾ ರಾವ್, ಹರೀಶ್ ಕಿಣಿ, ಜಿತೇಂದ್ರ ಫುರ್ತಾಡೋ, ಶರ್ಫುದ್ದೀನ್ ಶೇಖ್, ನವೀನ್ ಚಂದ್ರ ಜೆ. ಶೆಟ್ಟಿ, ಶ್ರೀನಿವಾಸ್ ಬೆಂಗಳೂರು, ಹರಿಪ್ರಸಾದ್ ರೈ, ಕಾಪು ದಿವಾಕರ್ ಶೆಟ್ಟಿ, ಸಂತೋಷ್ ಕುಲಾಲ್, ಗೀತಾ ವಾಗ್ಲೇ, ಶಾಂತಲತಾ ಶೆಟ್ಟಿ, ವೈ. ಸುಧೀರ್ ಕುಮಾರ್, ದಂಡ ತೀಥ ಸಮೂಹ ಶಿಕ್ಷಣ ಸಂಸ್ಥೆಯ ಆಲ್ಬನ್ ರೋಡ್ರಿಗಸ್, ಡಾ. ಪ್ರಶಾಂತ್ ಶೆಟ್ಟಿ, ನಡಿಕೆರೆ ರತ್ನಾಕರ್ ಶೆಟ್ಟಿ, ವಿಕ್ರಂ ಕಾಪು, ಸಂತೋಷ್ ಬೈರಂಪಳ್ಳಿ, ಲಕ್ಷ್ಮೀಶ ತಂತ್ರಿ, ಪ್ರಸಾದ್ ಕಾಂಚನ್, ನವೀನ್ ಎನ್. ಶೆಟ್ಟಿ, ಜ್ಯೋತಿ ಹೆಬ್ಬಾರ್, ಅಮೀರ್ ಮೊಹಮ್ಮದ್, ರಮೀಜ್ ಹುಸೇನ್, ಮೊಹಮ್ಮದ್ ನಿಯಾಜ್, ನಿರಂಜನ್ ಶೆಟ್ಟಿ, ರಾಜೇಶ್ ರಾವ್ ಪಾಂಗಳ, ಕಿರಣ್ ಉದ್ಯಾವರ, ಸುಧೀರ್ ಕರ್ಕೇರ, ಸತ್ಯನಾರಾಯಣ, ಕೆ. ಎಚ್. ಉಸ್ಮಾನ್, ಕರುಣಾಕರ್ ಪಡುಬಿದ್ರಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

ವೈ. ಸುಕುಮಾರ್ ಸ್ವಾಗತಿಸಿದರು. ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷ ಹರೀಶ್ ಕಿಣಿ ವಂದಿಸಿದರು. ಶ್ರೀಧರ್ ಪಿ. ಎಸ್ ಕಾರ್ಯಕ್ರಮ ನಿರೂಪಿಸಿದರು.

ಉದ್ಯೋಗ ಮೇಳದಲ್ಲಿ 68 ಕಂಪೆನಿಗಳು ಭಾಗವಹಿಸಿದ್ದು, 3886 ಅಭ್ಯರ್ಥಿಗಳು ಪಾಲ್ಗೊಂಡಿದ್ದು, 1898 ಉದ್ಯೋಗ ಪಡೆದುಕೊಂಡಿದ್ದಾರೆ. ಐಟಿಐ, ಸ್ನಾತಕೋತ್ತರ, ಪದವಿ, ಎಂ.ಬಿ.ಎ. ಇಂಜಿನಿಯರಿಂಗ್, ಇನ್ನಿತರ ಶೈಕ್ಷಣಿಕ ಅರ್ಹತೆ ಪಡೆದ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದರು. ಐಟಿ ಬಿಟಿ, ಆಟೋಮೊಬೈಲ್ ಎಜುಕೇಷನ್, ರಿಟೇಲ್, ಮಾರ್ಕೆಟಿಂಗ್, ಹೌಸ್ ಕೀಪಿಂಗ್, ಪಾರ್ಮಸಿ, ಇನ್ಸೂರೆನ್ಸ್, ಬ್ಯಾಂಕಿಂಗ್, ಹೋಟೆಲ್ ಮ್ಯಾನೇಜ್ಮೆಂಟ್, ಇಲೆಕ್ಟ್ರಿಕಲ್ಸ್, ಫಿಟ್ಟರ್, ನರ್ಸಿಂಗ್ ಇತ್ಯಾದಿ ಕ್ಷೇತ್ರಗಳ ಸಂಸ್ಥೆಗಳು ಪಾಲ್ಗೊಂಡಿತ್ತು.

Ads on article

Advertise in articles 1

advertising articles 2

Advertise under the article