ಶಂಕರನಾರಾಯಣ: ನಕಲಿ ಚಿನ್ನಾಭರಣ ನೀಡಿ ವಂಚನೆ: ಆರೋಪಿ ಬಂಧನ
Thursday, December 25, 2025
ಉಡುಪಿ: ರಾಯಚೂರು ಜಿಲ್ಲೆಯ ಗೋಪಾಲ ಎಂಬವರಿಗೆ ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ.ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಜಯಪ್ರಕಾಸ್ ಡಿ ಬಂಧಿತ ಆರೋಪಿ. ಸಿದ್ದಾಪುರದ ಕಮಲಶಿಲೆ ರಸ್ತೆಯಲ್ಲಿ ಆರೋಪಿಗಳು ಗೋಪಾಲ ಎಂಬವರಿಗೆ 150 ಗ್ರಾಂ ಚಿನ್ನವೆಂದು ಹೇಳಿ 5 ಲಕ್ಷ ಪಡೆದುಕೊಂಡು ನಕಲಿ ಚಿನ್ನ ನೀಡಿ ಪರಾರಿಯಾಗಿದ್ದರು. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಬಗ್ಗೆ ತನಿಖೆ ಕೈಗೊತ್ತಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿ ಆತನಿಂದ 4,50,000 ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಸುಮಾರು 10,00,000 ರೂ. ಮೌಲ್ಯದ ಕಾರನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
