ಪರಿಷತ್​ ಚುನಾವಣೆ: ಕಾಂಗ್ರೆಸ್‌ಗೆ ಗೆಲುವು; ಗೆಲುವಿನ ನಗೆ ಬೀರಿದ 5ನೇ ಅಭ್ಯರ್ಥಿ; ಜೆಡಿಎಸ್‌ಗೆ ಸೋಲಿನ ಆಘಾತ: BJP-JDS ಅಡ್ಡ ಮತದಾನ

ಬೆಂಗಳೂರು: ಬಹುನಿರೀಕ್ಷಿತ ವಿಧಾನ ಪರಿಷತ್​ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಕಣದಲ್ಲಿದ್ದ ಒಟ್ಟು 8 ಅಭ್ಯರ್ಥಿಗಳ ಭವಿಷ್ಯ ಪ್ರಕಟವಾಗಿದೆ. 

ಕಾಂಗ್ರೆಸ್​ನ ಎಲ್ಲಾ ಐದು ಅಭ್ಯರ್ಥಿಗಳು ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸಿದ್ದ 8 ಅಭ್ಯರ್ಥಿಗಳ ಪೈಕಿ ಬಿಜೆಪಿಯ ಇಬ್ಬರು ಮತ್ತು ಕಾಂಗ್ರೆಸ್​ 5 ಅಭ್ಯರ್ಥಿಗಳು ಮೇಲ್ಮನೆಗೆ ಪ್ರವೇಶ ಪಡೆದಿದ್ದಾರೆ. ಆದ್ರೆ, ಜೆಡಿಎಸ್‌ ಪಕ್ಷಕ್ಕೆ ಸೋಲಿನ ಆಘಾತ ಉಂಟಾಗಿದೆ.

ಬಿಜೆಪಿಯಿಂದ, ಜೆಡಿಎಸ್​ನಿಂದ ಅಡ್ಡ ಮತದಾನ    

ಜೆಡಿಎಸ್​​ ಪಕ್ಷದ ಅಭ್ಯರ್ಥಿ ಗೋವಿಂದ ರಾಜುಗೆ ಸೋಲು ಅನುಭವಿಸಿದ್ದಾರೆ. ಕಾಂಗ್ರೆಸ್​ ಪಕ್ಷದ 5ನೇ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ವಿನಯ್​ ಕಾರ್ತಿಕ್ ಅವರು ಗೆಲುವು ಸಾಧಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್​​​ ಶಾಸಕರ ಅಡ್ಡಮತದಾನದಿಂದ ವಿನಯ್ ಕಾರ್ತಿಕ್ ಅವರು ನಿರೀಕ್ಷೆಗಿಂತ ಹೆಚ್ಚು ಮತ ಪಡೆದು ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ಬಿಜೆಪಿ ಜೆಡಿಎಸ್ ಮತ ಸೆಳೆಯುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ.

ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕಾರ್ತಿಕ್ ಗೆ 32 ಮತಗಳು ಸಿಕ್ಕಿದ್ದರೆ ಜೆಡಿಎಸ್ ನ ಗೋವಿಂದರಾಜುಗೆ ಕೇವಲ 14 ಮತಗಳು ಮಾತ್ರ ಬಂದಿವೆ. ಜೆಡಿಎಸ್ ನಿಂದ ಮೂವರು ಹಾಗೂ ಬಿಜೆಪಿಯಿಂದ ಮೂವರು ಕ್ರಾಸ್ ವೋಟಿಂಗ್ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.