ನವದೆಹಲಿ: ಪ್ರತಿಭಟನೆ ಮುಂದುವರಿದಿರುವ ನಡುವೆಯೇ ಸಿಜೆಪಿ (CJP) ಮುಖಂಡರು ಕೇಂದ್ರ ಆರೋಗ್ಯ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ತಮ್ಮ ವಿವಿಧ ಬೇಡಿಕೆಗಳನ್ನು ಒಳಗೊಂಡ ಮನವಿಪತ್ರವನ್ನು ಸಲ್ಲಿಸಿದರು.
ಸಿಜೆಪಿ ವಕ್ತಾರ ಸೌರವ್ ದಾಸ್ ಅವರು 'ಎಕ್ಸ್' (ಹಿಂದಿನ ಟ್ವಿಟರ್) ನಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ತಾವು ಹಾಗೂ ಮತ್ತೋರ್ವ ವಕ್ತಾರ ಆಶುತೋಷ್ ರಾಂಕಾ ಅವರು ಜೆ.ಪಿ. ನಡ್ಡಾ ಅವರನ್ನು ಅವರ ನಿವಾಸದಲ್ಲಿ ಸುಮಾರು 10 ನಿಮಿಷಗಳ ಕಾಲ ಭೇಟಿ ಮಾಡಿ ಚರ್ಚೆ ನಡೆಸಿದರು. ಈ ವೇಳೆ ಸಂಘಟನೆಯ ಪ್ರಮುಖ ಬೇಡಿಕೆಗಳನ್ನು ಒಳಗೊಂಡ ಮನವಿಪತ್ರವನ್ನು ಸಚಿವರಿಗೆ ಹಸ್ತಾಂತರಿಸಲಾಯಿತು.
ಕೇಂದ್ರ ಸರ್ಕಾರ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಮುಖಂಡರ ಜೊತೆ ಮಾತುಕತೆ ನಡೆಸಿದೆ. ದೆಹಲಿಯಲ್ಲಿ ನಡೆದ 'ಚಲೋ ಸಂಸದ್' ಮೆರವಣಿಗೆಯ ಸಂದರ್ಭದಲ್ಲಿ ಕೇಂದ್ರ ಸಚಿವ ಜೆಪಿ ನಡ್ಡಾ ಅವರು ಸಿಜೆಪಿ ವಕ್ತಾರರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರು ಜೆಪಿ ನಡ್ಡಾ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು ಎಂದು ಸಂಘಟನೆ ತಿಳಿಸಿದೆ.
ಸಿಜೆಪಿ ನಾಯಕರು ತಾವು ಬೇಡಿಕೆಗಳ ಲಿಖಿತ ಪಟ್ಟಿಯನ್ನು ನೀಡಿದ್ದೇವೆ ಮತ್ತು ಪ್ರತಿಕ್ರಿಯಿಸುವ ಮೊದಲು ಬಿಜೆಪಿ ನಾಯಕತ್ವವನ್ನು ಸಂಪರ್ಕಿಸಲು ಸಮಯ ಕೋರಿದ್ದೇವೆ ಎಂದು ಹೇಳಿದ್ದಾರೆ. ನಡ್ಡಾ ಭೇಟಿಗೆ ಹೊರಡುವ ಮೊದಲು, ದಾಸ್ ತಮ್ಮ ಟ್ವಿಟರ್ ಅಕೌಂಟ್ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದರು. ಕಾಕ್ರೋಚ್ ಜನತಾ ಪಕ್ಷದ ಪರವಾಗಿ ನಾನು ಮತ್ತು ಅಶುತೋಷ್ ರಾಂಕಾ, ಜೆಪಿ ನಡ್ಡಾ ಅವರನ್ನು ಭೇಟಿ ಮಾಡಲು ಹೊರಟಿದ್ದೇವೆ. ಸರ್ಕಾರ ಬೆಳಿಗ್ಗೆ ಮಾತುಕತೆಗೆ ಕರೆ ನೀಡಿತ್ತು. ನಮ್ಮ ಬೇಡಿಕೆಗಳು ಸ್ಪಷ್ಟವಾಗಿವೆ. ಯುವಕರು ಭಾರಿ ಸಂಖ್ಯೆಯಲ್ಲಿ ಜಮಾಯಿಸಿದ್ದಾರೆ ಅಂತ ಬರೆದುಕೊಂಡಿದ್ದರು.
ಸಿಜೆಪಿಯ ಇಬ್ಬರು ನಾಯಕರು ಕೇಂದ್ರ ಸಚಿವರೊಂದಿಗೆ ಸುಮಾರು 10 ನಿಮಿಷಗಳ ಕಾಲ ಮಾತನಾಡುವ ಮೊದಲು ಎರಡು ಗಂಟೆಗಳಿಗೂ ಹೆಚ್ಚು ಕಾಲ ಕಾಯ್ದರು ಎಂದು ದಾಸ್ ಹೇಳಿದ್ದಾರೆ. 2 ಗಂಟೆಗಳಿಗೂ ಹೆಚ್ಚು ಕಾಲ ಕಾದ ನಂತರ, ಅಶುತೋಷ್ ರಾಂಕಾ ಮತ್ತು ನಾನು ಜೆಪಿ ನಡ್ಡಾ ಅವರನ್ನು ಅವರ ನಿವಾಸದಲ್ಲಿ 10 ನಿಮಿಷಗಳ ಕಾಲ ಭೇಟಿಯಾಗಿ, ಮನವಿ ಸಲ್ಲಿಸಿದ್ದೇವೆ ಎಂದು ದಾಸ್ ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.
ಉಪವಾಸ ನಿರತ ಸೊನಮ್ ವಾಂಗ್ಚುಕ್ ಅವರ ತಕ್ಷಣದ ಬಿಡುಗಡೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಮತ್ತು ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎನ್ನಲಾದ ಎಲ್ಲಾ ನೀಟ್ ಆಕಾಂಕ್ಷಿಗಳ ಕುಟುಂಬಗಳಿಗೆ ತಲಾ ₹ 1 ಕೋಟಿ ರೂಪಾಯಿ ಪರಿಹಾರ ಸೇರಿದಂತೆ 3 ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದೆ ಇಟ್ಟಿದ್ದಾರೆ.
"ನಮ್ಮ ಬೇಡಿಕೆಗಳನ್ನು ಒಳಗೊಂಡ ಲಿಖಿತ ಪತ್ರವನ್ನು ನಾವು ಸಲ್ಲಿಸುತ್ತೇವೆ, ಆದರೆ ಅದೇ ಸಮಯದಲ್ಲಿ ಆಂತರಿಕವಾಗಿ ಮಾತನಾಡುವುದಾಗಿ ಅವರು ನಮಗೆ ಭರವಸೆ ನೀಡಿದ್ದಾರೆ. ನಾವು ಆ ಪ್ರಕ್ರಿಯೆಯಲ್ಲಿದ್ದೇವೆ. ಸಾಮೂಹಿಕ ಬಂಧನ ಇತ್ಯಾದಿಗಳ ಸುದ್ದಿಗಳಿವೆ" ಎಂದು ದಾಸ್ ಹೇಳಿದರು. ಇನ್ನು ಈ ಸಭೆಯ ಕುರಿತು ಅಥವಾ ಯಾವುದೇ ಬೇಡಿಕೆಗಳನ್ನು ಸ್ವೀಕರಿಸಲಾಗುತ್ತದೆಯೇ ಎಂಬ ಬಗ್ಗೆ ಸರ್ಕಾರದಿಂದ ತಕ್ಷಣದ ಅಧಿಕೃತ ಹೇಳಿಕೆ ಬಂದಿಲ್ಲ.
