ಮಲ್ಪೆ; ಚೂರಿ ಇರಿದು ಮೀನುಗಾರ ಕಾರ್ಮಿಕನ ಬರ್ಬರ ಹತ್ಯೆ

ಮಲ್ಪೆ: ಮೀನುಗಾರ ಕಾರ್ಮಿಕನಿಗೆ ಚೂರಿ ಇರಿದು ಹತ್ಯೆ ಮಾಡಿದ ಘಟನೆ ಮಲ್ಪೆಯಲ್ಲಿ ಮಂಗಳವಾರ ಬೆಳಗ್ಗೆ ನಡೆದಿದೆ.

ಚಿಕ್ಕಮಗಳೂರು ಮೂಲದ ಅಭಿಷೇಕ್ (24) ಕೊಲೆಯಾದ ದುರ್ದೈವಿ. ರಾಯಚೂರು ಮೂಲದ ಗೋಂವಿಂದ ರಾಜು ಕೊಲೆ ಆರೋಪಿಯಾಗಿದ್ದಾನೆ. ಮುಂಜಾನೆ ಮಲ್ಪೆ ಬಂದರಿನಲ್ಲಿ ಯುವಕನಿಗೆ ಆರೋಪಿ ಚಾಕು ಇರಿದು ಪರಾರಿಯಾಗಿದ್ದ. ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. 

ವಿಚಾರಣೆ ವೇಳೆ, ಕುಡಿದ ಮತ್ತಿನಲ್ಲಿ ಆರೋಪಿ ಚೂರಿ ಇರಿದಿರುವುದು ಗೊತ್ತಾಗಿದೆ. ಅಭಿಷೇಕ್‌ ಶ್ರೀ ಮಹಾಕಾಳಿ ಬೋಟ್‌ನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.